Webdunia - Bharat's app for daily news and videos

Install App

ರಾಹುಲ್ ಗಾಂಧಿ ‘ಅಜ್ಜಿ ಮನೆ’ ಟ್ವೀಟ್ ಗೆ ಬಿಜೆಪಿ ನಾಯಕನ ವ್ಯಂಗ್ಯ

Webdunia
ಬುಧವಾರ, 14 ಜೂನ್ 2017 (09:27 IST)
ನವದೆಹಲಿ: ಬ್ಯುಸಿ ರಾಜಕಾರಣದ ಮಧ್ಯೆಯೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿದೇಶ ಪ್ರವಾಸ ಬಿಜೆಪಿಗೆ ಟೀಕೆಯ ವಸ್ತುವಾಗಿದೆ.

 
‘ನನ್ನ ಅಜ್ಜಿ ಮತ್ತು ಕುಟುಂಬದವರನ್ನು ಭೇಟಿಯಾಗಲು ವಿದೇಶಕ್ಕೆ ತೆರಳುತ್ತಿದ್ದೇನೆ. ಅವರನ್ನು ಭೇಟಿಯಾಗುವುದನ್ನು ಎದುರು ನೋಡುತ್ತಿದ್ದೇನೆ’ ಎಂದು ರಾಹುಲ್ ಟ್ವೀಟ್ ಮಾಡಿದ್ದರು. ಇದಕ್ಕೆ ಬಿಜೆಪಿ ನಾಯಕ ಕೈಲಾಶ್ ವಿಜಯ್ ವಾಗ್ರಿಯಾ ವ್ಯಂಗ್ಯವಾಡಿದ್ದಾರೆ.

‘ಚಿಕ್ಕವರಿದ್ದಾಗ ನಾವೂ ಬೇಸಿಗೆ ರಜೆಯಲ್ಲಿ ಅಜ್ಜಿ ಮನೆಗೆ ಹೋಗುತ್ತಿದ್ದೆವು. ಮಕ್ಕಳು ಈಗಲೂ ಅಜ್ಜಿ ಮನೆಗೆ ಹೋಗುತ್ತಾರೆ’ ಎಂದು ಟ್ವೀಟ್ ಮೂಲಕ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ತಾಯಿ ಸೋನಿಯಾ ಗಾಂಧಿ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದ ರಾಹುಲ್ ಗಾಂಧಿ ಇದೀಗ ಮತ್ತೆ ವಿದೇಶಕ್ಕೆ ತೆರಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಆದರೆ ಅವರು ಯಾವಾಗ ಮರಳುತ್ತಾರೆ, ಎಲ್ಲಿಗೆ ಹೋಗುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ. ಹಿಂದೊಮ್ಮೆ ಇದೇ ರೀತಿ ಸುಮಾರು ಒಂದೂವರೆ ತಿಂಗಳ ಕಾಲ ಅಜ್ಞಾತ ಸ್ಥಳಕ್ಕೆ ರಾಹುಲ್ ತೆರಳಿದ್ದರು. ಹೀಗಾಗಿ ಬಿಜೆಪಿ ಇದನ್ನೇ ಒಂದು ಟೀಕಾಸ್ತ್ರವಾಗಿಸಿದೆ.

ಆದರೆ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸಿಂಗ್ ಸುಜ್ರೇವಾಲಾ ಬಿಜೆಪಿ ಕಾಮೆಂಟ್ ಗೆ ಪ್ರತಿಕ್ರಿಯಿಸಿದ್ದು, ‘ರಾಹುಲ್ ಅಜ್ಜಿಗೆ 90 ವರ್ಷವಾಗಿದೆ. ಹಿರಿಯರನ್ನು ನೋಡಿಕೊಳ್ಳಬೇಕಾದ್ದು ನಮ್ಮ ಧರ್ಮ’ ಎಂದು ಸಮಜಾಯಿಷಿ ನೀಡಿದ್ದಾರೆ. ಆದರೆ ರಾಷ್ಟ್ರಪತಿ ಚುನಾವಣೆಯಂತಹ ಮಹತ್ವದ ರಾಜಕೀಯ ವಿದ್ಯಮಾನದ ಸಂದರ್ಭದಲ್ಲಿ ರಾಹುಲ್ ವಿದೇಶ ಭೇಟಿ ಅಚ್ಚರಿಗೆ ಕಾರಣವಾಗಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments