Webdunia - Bharat's app for daily news and videos

Install App

ತಾಪಮಾನ ಏರಿದಾಗ ರಾಹುಲ್ ವಿದೇಶಕ್ಕೆ ಹೋಗುತ್ತಾರೆ: ಶಾ

Webdunia
ಶನಿವಾರ, 2 ಜುಲೈ 2016 (17:02 IST)
ರಾಷ್ಟ್ರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಅನುಪಸ್ಥಿತಿಯನ್ನು ಪ್ರಶ್ನಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೇಶದಲ್ಲಿ ತಾಪಮಾನ ಏರಿಕೆಯಾದಾಗ ರಾಹುಲ್ ವಿದೇಶಕ್ಕೆ ತೆರಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. 

ದೇಶದಲ್ಲಿ ತಾಪಮಾನ ಏರಿಕೆಯಾದಾಗ ರಾಹುಲ್ ಬಾಬಾ ವಿದೇಶಕ್ಕೆ ತೆರಳುತ್ತಾರೆ ಮತ್ತು ಬಳಿಕ ಬಿಜೆಪಿಯಿಂದ ಆಡಳಿತದ ದಾಖಲೆ ಕೇಳುತ್ತಾರೆ ಎಂದು ಅವರು ಹೇಳಿದ್ದಾರೆ. 
 
ಬಸ್ತಿಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನ್ನಾಡುತ್ತಿದ್ದ ಅವರು 2017ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿಯನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಜನರಲ್ಲಿ ಆಗ್ರಹಿಸಿದ್ದಾರೆ. ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳನ್ನು ರಾಜ್ಯದಿಂದ ಹೊರದಬ್ಬಿ. ಅವರ ಉಪಸ್ಥಿತಿಯಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಅವರು ಅವರು ಕರೆ ನೀಡಿದ್ದಾರೆ.
 
ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಈ ಎರಡು ಪಕ್ಷಗಳೇ ಕಾರಣ ಎಂದು ಪ್ರತಿಪಾದಿಸಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸುತ್ತ ಬಿಜೆಪಿ ದೇಶಕ್ಕೆ ಮಾತನ್ನಾಡುವ ಪ್ರಧಾನಿಯನ್ನು ನೀಡಿದೆ. ಅವರು ವಿದೇಶಗಳಲ್ಲಿ ಭಾರತಕ್ಕೆ ವೈಭವವನ್ನು ತಂದುಕೊಡುತ್ತಿದ್ದಾರೆ. ಕಾಂಗ್ರೆಸ್ ಪ್ರಧಾನಿ ಬಹುಮುಖ್ಯ ವಿಷಯಗಳ ಬಗ್ಗೆ ಮಾತನ್ನಾಡುತ್ತಿದುದು ಅಪರೂಪವಾಗಿತ್ತು ಎಂದು ಅವರು ಟೀಕಿಸಿದ್ದಾರೆ. 
 
ಸಮಾಜವಾದಿ ಪಕ್ಷದ ಕಡೆ ಕೂಡ ಬಾಣ ಪ್ರಯೋಗಿಸಿದ ಅವರು, ಇದು ಗೋರಕ್ ನಾಥರ ಭೂಮಿ, ನಾನು ಮಾತಾಡಿದ್ದು ಲಖನೌನಲ್ಲಿರುವ ನೇತಾಜಿಯನ್ನು ( ಮುಲಾಯಂ ಸಿಂಗ ಯಾದವ್) ಅವರನ್ನು ತಲುಪಬಹುದು. ಅಪರಾಧಿಗಳು ಮತ್ತು ಭೂ ಮಾಫಿಯಾ ಎಸ್‌ಪಿ ಸರ್ಕಾರದಲ್ಲಿ ಮೈಲುಗೈ ಸಾಧಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments