ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ರೈತರ ಪರವಾಗಿಲ್ಲ ಉದ್ಯಮಿಗಳ ಪರವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಡುಗಿದ್ದಾರೆ.
ಭಾರತ ದೇಶದ ರೈತರು ತುಂಬಾ ಕಷ್ಟವನ್ನು ಎದುರಿಸುತ್ತಿದ್ದಾರೆ. ಆದರೆ, ಕೇಂದ್ರದಲ್ಲಿರುವ ಸರಕಾರ ಕೇವಲ ಎರಡು ಅಥವಾ ಮೂರು ಉದ್ಯಮಿಗಳ ಸರಕಾರವಾಗಿದೆ ಎಂದು ರೈತರು ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ರಾಹುಲ್ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಜಮ್ಮು ಕಾಶ್ಮಿರಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿದ್ದಾರೆ.
ನಿನ್ನೆ ಭಾರತ ಮತ್ತು ಪಾಕಿಸ್ತಾನದ ಗಡಿ ಗ್ರಾಮವಾದ ಬಾಲ್ಕೋಟೆಗೆ ಆಗಮಿಸಿದ್ದ ರಾಹುಲ್ ಗಾಂಧಿ, ಪಾಕ್ ಸೈನಿಕರ ದಾಳಿಗೆ ಬಲಿಯಾದ ಕುಟುಂಬಗಳೊಂದಿಗೆ ಚರ್ಚೆ ನಡೆಸಿದ್ದರು.