Webdunia - Bharat's app for daily news and videos

Install App

ರೈಲ್ವೆ ಟಿಕೆಟ್ ಅಗ್ಗ, ಸೇವಾಶುಲ್ಕ ಹಿಂಪಡೆತ: ಅರುಣ್ ಜೇಟ್ಲಿ

Webdunia
ಬುಧವಾರ, 1 ಫೆಬ್ರವರಿ 2017 (15:06 IST)
ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ತಮ್ಮ ಬಜೆಟ್‌ನಲ್ಲಿ ರೈಲ್ವೆ ಪ್ರಯಾಣಿಕರಿಗೆ ಸಂತಸ ತರುವ ಸುದ್ದಿ ನೀಡಿದ್ದಾರೆ. ಐಆರ್‌ಸಿಟಿಸಿ ವೆಬ್‌ಸೈಟ್‌ನಿಂದ ಟಿಕೆಟ್ ಬುಕ್ ಮಾಡುವ ರೈಲ್ವೆ ಪ್ರಯಾಣಿಕರ ಸೇವಾ ಶುಲ್ಕವನ್ನು ರದ್ದುಗೊಳಿಸಿದ್ದಾರೆ. 
 
ಇಲ್ಲಿಯವರೆಗೆ ಐಆರ್‌ಸಿಟಿಸಿಯಿಂದ ಎಸಿ-ಕ್ಲಾಸ್‌ ಟಿಕೆಟ್ ಬುಕ್ ಮಾಡುವ ಪ್ರಯಾಣಿಕರಿಗೆ ಪ್ರತಿ ಟಿಕೆಟ್‌ಗೆ 40 ರೂಪಾಯಿ ಸೇವಾ ಶುಲ್ಕ ಪಡೆಯಲಾಗುತ್ತಿತ್ತು. ಸ್ಲೀಪರ್ ಕ್ಲಾಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಟಿಕೆಟ್‌ಗೆ 20 ರೂಪಾಯಿ ಸೇವಾ ಶುಲ್ಕ ಭರಿಸಬೇಕಾಗುತ್ತಿತ್ತು. 
 
ಇ-ಟಿಕೆಟ್‌ ಬುಕ್ ಮಾಡುವ ಪ್ರಯಾಣಿಕರ ಸೇವಾ ಶುಲ್ಕವನ್ನು ಹಿಂಪಡೆಯಲಾಗಿದೆ. ನಗದು ರಹಿತ ರಿಸರ್ವೇಶನ್‌ಗಳು ಶೇ.58 ರಿಂದ ಶೇ.68ಕ್ಕೆ ಹೆಚ್ಚಳವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.  
 
ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರೈಲ್ವೆ ಬಜೆಟ್ ಮತ್ತು ಸಾಮಾನ್ಯ ಬಜೆಟ್‌ನ್ನು ಜಂಟಿಯಾಗಿ ಮಂಡಿಸಿದ ಸಚಿವ ಜೇಟ್ಲಿ, ರೈಲ್ವೆ ಇಲಾಖೆಯ ಒಟ್ಟು ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚ 2017-2018ರ ಸಾಲಿನಲ್ಲಿ 1, 31000 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. 
 
ಕೇಂದ್ರ ಸರಕಾರ ರೈಲ್ವೆ ಇಲಾಖೆಯಲ್ಲಿ ಪ್ರಮುಖ ನಾಲ್ಕು ವಿಭಾಗಗಳಲ್ಲಿ ಗುರಿಯಾಗಿಸಿಕೊಂಡಿದ್ದು, ಪ್ರಯಾಣಿಕರ ಸುರಕ್ಷತೆ, ಬಂಡವಾಳ, ಅಭಿವೃದ್ಧಿ ಯೋಜನೆಗಳು, ಸ್ವಚ್ಚತೆ ಮತ್ತು ಆರ್ಥಿಕತೆಯಲ್ಲಿ ಸುಧಾರಣೆ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments