ರಾಜ್ಯಸಭಾ ಸಂಸದ ರಾಜ್ ಬಬ್ಬರ್ರನ್ನು ಉತ್ತರಪ್ರದೇಶದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.
ಉತ್ತರಪ್ರದೇಶದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರನ್ನು ನೇಮಕ ಮಾಡಲಾಗಿದೆ.
ಇಂದು ಬೆಳಿಗ್ಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ ಪ್ರಿಯಾಂಕಾ, ನಂತರ ಉತ್ತರಪ್ರದೇಶ ರಾಜ್ಯದ ಪಕ್ಷದ ಉಸ್ತುವಾರಿ ಹೊತ್ತಿರುವ ಗುಲಾಮ್ ನಬಿ ಆಜಾದ್ರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಸುಮಾರು ಒಂದು ಗಂಟೆ ಕಾಲ ಪ್ರಿಯಾಂಕಾ ಗಾಂಧಿ ಮತ್ತು ಗುಲಾಮ್ ನಬಿ ಆಜಾದ್ ಪರಸ್ಪರ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, 2017ರ ಚುನಾವಣೆಯಲ್ಲಿ ಪ್ರಿಯಾಂಕಾ ಹೊಣೆಯ ಕುರಿತಂತೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ, ಪ್ರಿಯಾಂಕಾ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಉತ್ತರಪ್ರದೇಶ ಚುನಾವಣೆ ಕಣಕ್ಕೆ ಧುಮಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.