Webdunia - Bharat's app for daily news and videos

Install App

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Krishnaveni K
ಬುಧವಾರ, 18 ಜೂನ್ 2025 (08:14 IST)
ಲಕ್ನೋ: ಇಂಧೋರ್ ನ ಹನಿಮೂನ್ ಮರ್ಡರ್ ಕೇಸ್ ಭಾರೀ ಸದ್ದು ಮಾಡುತ್ತಿರುವಾಗಲೇ ಉತ್ತರ ಪ್ರದೇಶದಲ್ಲಿ ನವವಿವಾಹಿತನೊಬ್ಬ ಸದ್ಯ ನನ್ನ ಗತಿ ಹೀಗಾಗಲಿಲ್ಲವಲ್ಲಾ ಎಂದು ದೇವರಿಗೆ ಧನ್ಯವಾದ ಸಲ್ಲಿಸಿದ್ದಾನೆ.

ಇಂಧೋರ್ ನ ರಾಜ ರಘುವಂಶಿಯನ್ನು ಆತನ ಪತ್ನಿಯೇ ಹನಿಮೂನ್ ಗೆಂದು ಮೇಘಾಲಯಕ್ಕೆ ಕರೆದೊಯ್ದು ಪ್ರಿಯಕರ ರಾಜ್ ಕುಶ್ವಾಹ ಜೊತೆ ಸೇರಿಕೊಂಡು ಕೊಲೆ ಮಾಡಿದ್ದಳು. ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು.

ಇದೀಗ ಉತ್ತರ ಪ್ರದೇಶದಲ್ಲೂ ಅಂತಹದ್ದೇ ಘಟನೆ ಆಗುವುದರಲ್ಲಿತ್ತು. ಉತ್ತರ ಪ್ರದೇಶದ ಬದನೌ ನಲ್ಲಿ ಮದುವೆಯಾದ 13 ದಿನಕ್ಕೇ ಪತ್ನಿ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದಳು.  ಪೊಲೀಸರು ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಪತ್ತೆ ಮಾಡಿ ಪೊಲೀಸ್ ಠಾಣೆಗೆ ಕರೆತಂದಿದ್ದರು.

ಪತ್ನಿಯನ್ನು ಆಕೆಯ ಪ್ರಿಯಕರನೊಂದಿಗೆ ಪೊಲೀಸ್ ಠಾಣೆಯಲ್ಲಿ ನೋಡಿದ ಪತಿ ಕಣ್ಣೀರು ಹಾಕಿದ್ದಾನೆ. ಸದ್ಯ ದೇವರು ನನ್ನ ಬಚಾವ್ ಮಾಡಿದ. ಬಹುಶಃ ಅಕೆಯನ್ನು ಹನಿಮೂನ್ ಗೆ ಕರೆದೊಯ್ದಿದ್ದರೆ ನನ್ನನ್ನೂ ರಾಜ ರಘುವಂಶಿಯಂತೆ ಕೊಲೆ ಮಾಡುತ್ತಿದ್ದಳೇನೋ ಎಂದು ಪತಿ ಕಣ್ಣೀರು ಹಾಕುತ್ತಿದ್ದಾನೆ. ಪತ್ನಿಯ ಬಳಿ ಸದ್ಯ ನೀನು ಪ್ರಿಯಕರನೊಂದಿಗೆ ಓಡಿ ಹೋದೆ. ನನ್ನನ್ನು ಕೊಲೆ ಮಾಡಲಿಲ್ಲವಲ್ಲ ಎಂದು ಹೇಳಿ ಆಕೆಯನ್ನು ಅಲ್ಲಿಯೇ ಪ್ರಿಯಕರನ ಜೊತೆ ಬಿಟ್ಟು ಬಂದಿದ್ದಾನಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಇಂದು ಭಾರೀ ಮಳೆ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಮುಂದಿನ ಸುದ್ದಿ
Show comments