Webdunia - Bharat's app for daily news and videos

Install App

ಬೆದರಿಕೆ ಹಾಕುತ್ತಿದ್ದ ಮಹಿಳೆಯನ್ನು ಕೊಂದು ಪೊಲೀಸ್ ವರಿಷ್ಠಾಧಿಕಾರಿ ಆತ್ಮಹತ್ಯೆ

Webdunia
ಶುಕ್ರವಾರ, 23 ಡಿಸೆಂಬರ್ 2016 (15:17 IST)
ಭಯೋತ್ಪಾದನಾ ನಿಗ್ರಹ ದಳದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯೋರ್ವರು ತಮಗೆ ಬೆದರಿಕೆ ಹಾಕುತ್ತಿದ್ದ ಯುವತಿಯನ್ನು ಹತ್ಯೆಗೈದು ಗುಂಡಿಟ್ಟು ಕೊಂದು ತಾವು ಕೂಡ ಆತ್ಮಹತ್ಯೆಗೆ ಶರಣಾದ ಘಟನೆ ಜೈಪುರದಲ್ಲಿ ನಡೆದಿದೆ. 

ಅಧಿಕಾರಿ ಆಶೀಸ್ ಪ್ರಭಾಕರ್ (42) ಮತ್ತು ಹತ್ಯೆಗೊಳಗಾದ ಪೂನಮ್ ಶರ್ಮಾ ಅವರಿಬ್ಬರ ಶವ ತಲೆಗೆ ಬುಲೆಟ್ ಗಾಯವಾಗಿರುವ ಸ್ಥಿತಿಯಲ್ಲಿ ಜಗತ್ಪುರಾ ಪ್ರದೇಶದ ಬಾಂಬೈ ಆಸ್ಪತ್ರೆ ಬಳಿ ನಿಲ್ಲಿಸಿ ಲಾಕ್ ಮಾಡಲಾಗಿದ್ದ ಎಸ್‌ಯುವಿ ಒಳಗಡೆ ಮಂಗಳವಾರ ತಡರಾತ್ರಿ ಪತ್ತೆಯಾಗಿದೆ. 
 
ಪ್ರಭಾಕರ್ ಅವರಿಂದ ಕೊಲೆಯಾದ ಯುವತಿ 28ರಿಂದ 30 ವರ್ಷದೊಳಗಿನವಳು ಎಂದು ತಿಳಿದು ಬಂದಿದೆ. ಮಂಗಳವಾರ ರಾತ್ರಿ 8ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದ್ದು ಸರ್ವಿಸ್ ರಿವಾಲ್ವರ್‌ನಿಂದಲೇ ಹತ್ಯೆ ಮತ್ತು ಆತ್ಮಹತ್ಯೆ ನಡೆದಿದೆ. 
 
2 ಪುಟಗಳ ಡೆತ್ ನೋಟ್ ಬರೆದಿಟ್ಟಿರುವ ಅಧಿಕಾರಿ ತಪ್ಪು ದಾರಿ ಆಯ್ಕೆ ಮಾಡಿಕೊಂಡಿದ್ದಕ್ಕೆ ಪತ್ನಿಯ ಕ್ಷಮೆ ಕೇಳಿದ್ದಾರೆ. ಆ ಪತ್ರದಲ್ಲಿ ಕೆಲವು ಮೊಬೈಲ್ ಸಂಖ್ಯೆ ಮತ್ತು ಫೇಸ್‌ಬುಕ್ ಪ್ರೊಫೈಲ್ ಸಹ ನಮೂದಿಸಿರುವ ಅವರು ಕೆಲವರು ತಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದರು ಎಂದಿದ್ದಾರೆ. ಆದರೆ ಹೆಚ್ಚಿನ ವಿವರಗಳನ್ನು ಬರೆದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರು: ಉಗ್ರ ನಾಸಿರ್ ಜೈಲಿನಿಂದ ಪರಾರಿಯಾಗಲು ನಡೆದಿತ್ತು ಖತರ್ನಾಕ್ ಪ್ಲ್ಯಾನ್

ಹೃದಯಾಘಾತಕ್ಕೆ ತಿಂಗಳ ಮುಂಚೇ ಸಿಗುವ ಮುನ್ಸೂಚನೆಗಳೇನು: ಡಾ ಸಿಎನ್ ಮಂಜುನಾಥ್

ಥಾಣೆ: ಮುಟ್ಟಾಗಿದೆಯಾ ಎಂದು ಬಾಲಕಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್

ಮುಂದಿನ ಸುದ್ದಿ
Show comments