ಜೈಪುರ: ಪ್ರವಾಸಕ್ಕೆ ಬಂದಿದ್ದ ಎಂಟು ಮಂದಿ ಪ್ರವಾಸಿ ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಜಸ್ಥಾನದ ಟೊಂಕ್ ಜಿಲ್ಲೆಯಲ್ಲಿ ನಡೆದಿದೆ.
ಬನಾಸ್ ನದಿಯಲ್ಲಿ ಸ್ನಾನ ಮಾಡಲು 25ರಿಂದ 30 ವರ್ಷ ವಯಸ್ಸಿನ 11 ಮಂದಿ ಯುವಕರು ಇಳಿದಿದ್ದಾರೆ. ಇದೇ ವೇಳೆ 8 ಮಂದಿ ನೀರುಪಾಲಾಗಿದ್ದಾರೆ.
ನೀರುಪಾಲಾದ ಮೂವರನ್ನು ರಕ್ಷಿಸಲಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಸಂತಾಪ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದೇನೆ. ಬನಾಸ್ ನದಿಯಲ್ಲಿ ಮುಳುಗಿ 8 ಮಂದಿ ಪ್ರವಾಸಿಗರು ಮೃತಪಟ್ಟಿರುವ ಸುದ್ದಿ ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿಯಾಗಿದೆ ಎಂದು ಭಜನ್ಲಾಲ್ ಶರ್ಮಾ ಹೇಳಿದ್ದಾರೆ.