Webdunia - Bharat's app for daily news and videos

Install App

ರಾಜಸ್ಥಾನ ಸ್ಥಳೀಯ ಚುನಾವಣೆ: 670 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ

Webdunia
ಸೋಮವಾರ, 6 ಸೆಪ್ಟಂಬರ್ 2021 (07:32 IST)
ಜೈಪುರ (ಸೆ 06); ರಾಜಸ್ಥಾನದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆದಿದ್ದು, ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ರಾಜ್ಯದ ಆರು ಜಿಲ್ಲೆಗಳ 78 ಪಂಚಾಯತ್ ಸಮಿತಿಯ 1,564 ಸ್ಥಾನಗಳಿಗೆ ಮತ್ತು ಜಿಲ್ಲಾ ಪರಿಷತ್ನ 200 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಶನಿವಾರ ಫಲಿತಾಂಶ ಪ್ರಕಟವಾಗಿದೆ.

ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಕಳೆದ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗೆದ್ದಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ. ಒಟ್ಟು 1,564 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವು 670 ಪಂಚಾಯತಿ ಸ್ಥಾನಗಳನ್ನು ಮತ್ತು ಬಿಜೆಪಿ 551 ರಲ್ಲಿ ಸ್ಥಾನಗಳನ್ನು ಗೆದ್ದಿದೆ. ಇನ್ನು, ಆರ್ಎಲ್ಪಿ 40 ಮತ್ತು ಬಿಎಸ್ಪಿ 11 ಸ್ಥಾನಗಳನ್ನು ಗೆದ್ದಿದೆ. ಸ್ವತಂತ್ರ ಅಭ್ಯರ್ಥಿಗಳು 290 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಎರಡು ಸ್ಥಾನಗಳ ಫಲಿತಾಂಶ ಪ್ರಕಟವಾಗಿಲ್ಲ.
ಜಿಲ್ಲಾ ಪರಿಷತ್ನ ಒಟ್ಟು 200 ಸ್ಥಾನಗಳಲ್ಲಿ ಕಾಂಗ್ರೆಸ್ 99 ಸ್ಥಾನಗಳು, ಬಿಜೆಪಿ 90 ಸ್ಥಾನಗಳನ್ನು ಗೆದ್ದಿವೆ. ಉಳಿದಂತೆ ಇತರ ಪಕ್ಷಗಳು 11 ಸ್ಥಾನಗಳನ್ನು ಗೆದ್ದಿವೆ. ಕಳೆದ ಚುನಾವಣೆಯಲ್ಲಿ 1,328 ಪಂಚಾಯಿತಿ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 585 ಸ್ಥಾನ ಗೆದ್ದಿತ್ತು. ಆದರೆ, ಈ ಬಾರಿ ಒಟ್ಟು ಸ್ಥಾನಗಳ ಸಂಖ್ಯೆ 1,564ಕ್ಕೆ ಹೆಚ್ಚಿದ್ದರೂ, ಬಿಜೆಪಿ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಿದೆ.
ಹಿಂದಿನ ಚುನಾವಣೆಯಲ್ಲಿ ಬಿಜೆಪಿ 100 ಜಿಲ್ಲಾ ಪಂಚಾಯತ್ ಸ್ಥಾನಗಳನ್ನು ಗೆದ್ದಿದ್ದರೆ, 90 ಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿತ್ತು. ಆಗಸ್ಟ್ 26, 29 ಮತ್ತು ಸೆಪ್ಟೆಂಬರ್ 1 ರಂದು ಭರತಪುರ, ದೌಸಾ, ಜೈಪುರ, ಜೋಧಪುರ, ಸವಾಯಿ ಮಾಧೋಪುರ ಮತ್ತು ಸಿರೋಹಿ ಜಿಲ್ಲೆಗಳಲ್ಲಿ ಚುನಾವಣೆ ನಡೆದಿತ್ತು. ಒಟ್ಟು ಆರು ಜಿಲ್ಲಾ ಪರಿಷತ್ನ 200 ಸದಸ್ಯರು ಮತ್ತು 78 ಪಂಚಾಯತ್ ಸಮಿತಿಯ 1,564 ಸದಸ್ಯರನ್ನು ಆಯ್ಕೆ ಮಾಡಲು ಮೂರು ಹಂತಗಳಲ್ಲಿ ಮತದಾನ ನಡೆದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವರ ಮಕ್ಕಳ ಒತ್ತಡಕ್ಕೆ ಈ ವಿಜಯೋತ್ಸವ ಆಚರಿಸಲಾಯಿತೇ: ಶೋಭಾ ಕರಂದ್ಲಾಜೆ

Chinnaswamy stampede: ಹೈಕೋರ್ಟ್ ಜಡ್ಜ್ ತನಿಖೆ, 50 ಲಕ್ಷ ಪರಿಹಾರ ಕೊಡಲು ವಿಜಯೇಂದ್ರ ಆಗ್ರಹ

ಅಲ್ಲು ಅರ್ಜುನ್ ರೀತಿ ಸಿದ್ದರಾಮಯ್ಯ, ಡಿಕೆಶಿಯನ್ನು ಅರೆಸ್ಟ್ ಮಾಡಬೇಕು: ಬಸನಗೌಡ ಯತ್ನಾಳ್

Chinnaswamy stampede : ಪಹಲ್ಗಾಮ್ ದಾಳಿಗೆ ಕೇಂದ್ರದ ಮೇಲೆ ಗೂಬೆ ಕೂರಿಸಿದ್ರಿ ಈಗೇನಂತೀರಿ

Chinnaswamy stampede: ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಲ್ಲವೇ: ಸಿ.ಟಿ.ರವಿ

ಮುಂದಿನ ಸುದ್ದಿ
Show comments