Webdunia - Bharat's app for daily news and videos

Install App

ಬಿಜೆಪಿ ಹೈಕಮಾಂಡ್‌‍ಗೆ ತಾಕತ್ತಿದ್ರೆ ನನ್ನನ್ನು ಪಕ್ಷದಿಂದ ಹೊರಹಾಕಲಿ : ಬಿಜೆಪಿ ಶಾಸಕ

Webdunia
ಭಾನುವಾರ, 7 ಜನವರಿ 2018 (18:36 IST)
ಒಂದು ವೇಳೆ, ಬಿಜೆಪಿಗೆ ತಾಕತ್ತಿದ್ದಲ್ಲಿ ಪಕ್ಷದಿಂದ ಹೊರಹಾಕಲಿ ಎಂದು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಘನಶ್ಯಾಮ್ ತಿವಾರಿ ಗುಡುಗಿದ್ದಾರೆ.
ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಇಂತಹ ಸರ್ವಾಧಿಕಾರಿ ಧೋರಣೆ ಸಹಿಸಲು ಸಾಧ್ಯವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
 
ಭರತ್‌ಪುರ್ ಜಿಲ್ಲೆಯಲ್ಲಿ ಆಯೋಜಿಸಲಾದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗನೇರ್ ಜಿಲ್ಲೆಯ ಶಾಸಕ ತಿವಾರಿ, ಸರಕಾರದ ವಿರುದ್ಧ ನಿರಂತರವಾಗಿ ಪ್ರತಿಭಟಿಸುತ್ತಿದ್ದೇನೆ. ಒಂದು ವೇಳೆ ಪಕ್ಷದ ಹೈಕಮಾಂಡ್‌ಗೆ ತಾಕತ್ತಿದ್ರೆ ಪಕ್ಷದಿಂದ ಹೊರಹಾಕಲಿ ಎಂದು ಅಬ್ಬರಿಸಿದ್ದಾರೆ.
 
ರಾಜ್ಯದ ಅಳ್ವಾರ್, ಅಜ್ಮೇರ್ ಜಿಲ್ಲೆಗಳಲ್ಲಿ ಉಪಲೋಕಸಭಾ ಚುನಾವಣೆ ನಡೆಯುತ್ತಿದ್ದು ಮತ್ತು ಮಂಡಲ್‌ಘರ್‌ನಲ್ಲಿ ವಿಧಾನಸಭೆಗೆ ಇದೇ ತಿಂಗಳು ಉಪಚುನಾವಣೆ ನಡೆಯಲಿದೆ. ಕಳೆದ ನಾಲ್ಕು ವರ್ಷಗಳ ಸಾಧನೆಯನ್ನು ಜನತೆ ಪ್ರಶ್ನಿಸುತ್ತಿದ್ದಾರೆ. ಸಿಎಂ ರಾಜೇ ಕಪ್ಪು ಕಾಯ್ದೆಯನ್ನು ಯಾಕೆ ಜಾರಿಗೆ ತಂದಿದ್ದಾರೆ?ಯುವಕರಿಗೆ ಯಾಕೆ ಉದ್ಯೋಗ ನೀಡಲಿಲ್ಲ. ಮೀಸಲಾತಿಯ ನೆಪದಲ್ಲಿ ಸರಕಾರ ಉದ್ಯೋಗಗಳನ್ನು ಯಾಕೆ ನೆನೆಗುದಿಯಲ್ಲಿಡಲಾಯಿತು? ಎಂದು ಪ್ರಶ್ನಿಸಿದ್ದಾರೆ. 
 
ಜೈಪುರ್‌ನ ಸಂಗಾನೇರ್ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗಿ ಶಾಸಕರಾಗಿರುವ ತಿವಾರಿ, ಜನತೆಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸರಕಾರದ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಪಕ್ಷಕ್ಕೆ ಧಮ್ ಇದ್ರೆ ಪಕ್ಷದಿಂದ ಹೊರಹಾಕಲಿ ಎಂದರು.
 
ವಸುಂಧರಾ ರಾಜೇಯನ್ನು ಸಿಎಂ ಸ್ಥಾನದಿಂದ ಕಿತ್ತುಹಾಕದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ದೊರೆಯುವುದಿಲ್ಲ ಎಂದು ಹಿರಿಯ ಬಿಜೆಪಿ ನಾಯಕ ಘನಶ್ಯಾಮ್ ತಿವಾರಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments