Webdunia - Bharat's app for daily news and videos

Install App

ಕಾರು ಅಪಘಾತಕ್ಕೆ ಮೂರು ಬಲಿ: ರಾಜಸ್ಥಾನ ಶಾಸಕನ ಪುತ್ರನ ಬಂಧನ

Webdunia
ಶನಿವಾರ, 2 ಜುಲೈ 2016 (19:23 IST)
ಅಟೋರಿಕ್ಷಾ ಮತ್ತು ಪೊಲೀಸ್ ವಾಹನಕ್ಕೆ ಡಿಕ್ಕಿಹೊಂಡದು ಮೂವರ ಸಾವಿಗೆ ಕಾರಣನಾದ ಸ್ವತಂತ್ರ ಶಾಸಕ ನಂದಕಿಶೋರ್ ಮೆಹರಾ ಪುತ್ರ ಸಿದ್ಧಾರ್ಥ ಮೆಹರಾನನ್ನು ಪೊಲೀಸರು ಬಂಧಿಸಿದ್ದಾರೆ.
   
ಪೊಲೀಸ್ ಮೂಲಗಳ ಪ್ರಕಾರ, ಸಿದ್ಧಾರ್ಥ ಮೆಹರಾ ಅಪಘಾತವೆಸಗಿದ ಸಂದರ್ಭದಲ್ಲಿ ಮದ್ಯ ಸೇವಿಸಿದ್ದನು ಎನ್ನಲಾಗಿದೆ. ಅಪಘಾತದಲ್ಲಿ ಸಹಾಯಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇತರ ಮೂವರು ಗಾಯಗೊಂಡಿದ್ದಾರೆ. ಅಟೋರಿಕ್ಷಾದಲ್ಲಿದ್ದ ಮೃತರಾದ ಮೂವರ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭಿಸಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. 
 
ಆದರೆ, ಆರೋಪಗಳನ್ನು ತಳ್ಳಿಹಾಕಿದ ಸಿದ್ಧಾರ್ಥ ನಾನು ಕಾರು ಚಲಾಯಿಸುತ್ತಿರಲಿಲ್ಲ ಮತ್ತು ಮದ್ಯ ಸೇವಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾನೆ.
 
ಅಪಘಾತದ ಘಟನೆ ನಡೆಯುತ್ತಿದ್ದಂತೆ ಸಿದ್ಧಾರ್ಥ ಮೆಹರಿಯಾನನ್ನು ಪೊಲೀಸರು ಬಂಧಿಸಿ ಮದ್ಯ ಸೇವನೆ ಪರೀಕ್ಷೆಗಾಗಿ ರಕ್ತದ ಸ್ಯಾಂಪಲ್‌ಗಳನ್ನು ವೈದ್ಯಕೀಯ ತಪಾಸಣೆಗಾಗಿ ಕಳುಹಿಸಿಕೊಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments