Select Your Language

Notifications

webdunia
webdunia
webdunia
webdunia

ನೋಟು ನಿಷೇಧದ ವಿರುದ್ಧ ಶಿವಸೇನೆ ಪ್ರತಿಭಟನೆ: ಠಾಕ್ರೆಗೆ ಫೋನಾಯಿಸಿದ ರಾಜನಾಥ್ ಸಿಂಗ್

ನೋಟು ನಿಷೇಧದ ವಿರುದ್ಧ ಶಿವಸೇನೆ ಪ್ರತಿಭಟನೆ: ಠಾಕ್ರೆಗೆ ಫೋನಾಯಿಸಿದ ರಾಜನಾಥ್ ಸಿಂಗ್
ನವದೆಹಲಿ , ಗುರುವಾರ, 17 ನವೆಂಬರ್ 2016 (18:58 IST)
ನೋಟು ನಿಷೇಧ ವಿರೋಧಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಷ್ಟ್ರೀಯ ರಾಜಧಾನಿ ನವದೆಹಲಿಯಲ್ಲಿ ಕೈಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ಮಿತ್ರಪಕ್ಷ ಶಿವಸೇನೆ ಕೂಡ ಪಾಲ್ಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸೇನೆಯ ವರಿಷ್ಠ ಕೇಂದ್ರ ಸಚಿವ ರಾಜನಾಥ್ ಸಿಂಗ್ ತಮ್ಮ ಮಿತ್ರ ಪಕ್ಷ ಶಿವಸೇನೆ ಉದ್ಧವ್ ಠಾಕ್ರೆಗೆ ಪೋನಾಯಿಸಿದ್ದಾರೆ. 
 
ಈ ಸಂದರ್ಭದಲ್ಲಿ ಠಾಕ್ರೆ ಅವರಿಗೆ ರಾಜನಾಥ್, ಜನರ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದ್ದಾರೆ. 
 
ಬುಧವಾರ ಶಿವಸೇನೆ ತನ್ನ ಸಂಸದರನ್ನು ಮಮತಾ ಬ್ಯಾನರ್ಜಿ ಭೇಟಿಗೆಂದು ಕಳುಹಿಸಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಸಂಜಯ್ ರಾವುತ್, ಇದು ಆಡಳಿತ ಪಕ್ಷ ಅಥವಾ ವಿರೋಧ ಪಕ್ಷವೆಂಬ ಪ್ರಶ್ನೆ ಅಲ್ಲ. ಇದು ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದ್ದು ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನೋಟ್ ಬ್ಯಾನ್ ಒಂದು ರಾಜಕೀಯ ಗಿಮಿಕ್: ಸಚಿವ ಖಾದರ್