Webdunia - Bharat's app for daily news and videos

Install App

ಉಗ್ರ ಸೈಫುಲ್ಲಾ ತಂದೆಯ ಬಗ್ಗೆ ರಾಜನಾಥ್ ಸಿಂಗ್ ಮೆಚ್ಚುಗೆ

Webdunia
ಗುರುವಾರ, 9 ಮಾರ್ಚ್ 2017 (17:06 IST)
ರಾಷ್ಟ್ರೀಯ ತನಿಖಾ ಸಂಸ್ಥೆ  ಉತ್ತರ ಪ್ರದೇಶದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಬಲಿಯಾದ ಸ್ವಯಂಘೋಷಿತ ಉಗ್ರ ಸೈಫುಲ್ಲಾ ತಂದೆ ಮಗನ ಶವವನ್ನು ಸ್ವೀಕರಿಸಲು ನಿರಾಕರಿಸಿದ ಬಗ್ಗೆ ಗೃಹ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ರೈಲು ಸ್ಪೋಟ ಮತ್ತು ಲಖನೌ ಎನ್‌ಕೌಂಟರ್ ಬಗ್ಗೆ ಲೋಕಸಭೆಯಲ್ಲಿ ವಿವರಿಸಿದ ಸಿಂಗ್, ಒಬ್ಬ ಉಗ್ರನನ್ನು ಹತಗೈದು ಆತನ ಬಳಿಯಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.ಇತರೆ ಆರು ಶಂಕಿತರನ್ನು ಬಂಧಿಸಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಹತನಾದ ಸೈಫುಲ್ಲಾನ ತಂದೆ ದೇಶಕ್ಕೆ ಮಾದರಿ ಎಂದು ಅವರು ತಿಳಿಸಿದ್ದಾರೆ. ಸೈಫುಲ್ಲಾನ ತಂದೆ ಸರ್ತಾಜ್ ಬಗ್ಗೆ ನಮಗೆ ಅನುಕಂಪವಿದೆ. ಜತೆಗೆ ಅವರ ಬಗ್ಗೆ ಸರ್ಕಾರಕ್ಕೆ ಹೆಮ್ಮೆ ಇದೆ. ಸಂಪೂರ್ಣ ಲೋಕಸಭೆ ನನ್ನೊಂದಿಗೆ ಇದೆ ಎಂದು ಭಾವಿಸುತ್ತೇನೆ ಎಂದು ಅವರು ಹೇಳಿದರು.

ಜತೆಗೆ ಮಧ್ಯಪ್ರದೇಶ ರೈಲು ಸ್ಪೋಟ ಮತ್ತು ಎನ್‌ಕೌಂಟರ್ ಬಗ್ಗೆ ತನಿಖೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
 
ಲಖನೌನ ಠಾಕೂರ್‌ಗಂಜ್ ಪ್ರದೇಶದಲ್ಲಿ ಎಟಿಎಸ್ (ಭಯೋತ್ಪಾದಕ ನಿಗ್ರಹ ಪಡೆ) ಗುಂಡೇಟಿಗೆ ಹತನಾದ ಶಂಕಿತ ಉಗ್ರ ಸೈಫುಲ್ಲಾ ಮೃತದೇಹವನ್ನು ಸ್ವೀಕರಿಸಲು ಕಾನ್ಪುರದ ನಿವಾಸಿಯಾಗಿರುವ ಆತನ ತಂದೆ ಸರ್ತಾಜ್ ನಿರಾಕರಿಸಿದ್ದರು.
 
ದೇಶದ್ರೋಹಿ ನಮ್ಮ ಮಗನಾಗಿರಲು ಸಾಧ್ಯವಿಲ್ಲ. ನಾವು ಭಾರತೀಯರು. ಇಲ್ಲಿಯೇ ಹುಟ್ಟಿ ಬೆಳೆದವರು. ನಮ್ಮ ಪೂರ್ವಜರು ಕೂಡ ಭಾರತೀಯರು. ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವ ನಮ್ಮ ಮಗನಾಗಿರಲು ಸಾಧ್ಯವಿಲ್ಲ.  ನಾವು ಈ ಮೃತದೇಹವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸರ್ತಾಜ್ ಹೇಳಿದ್ದರು. ಹೀಗಾಗಿ ಆತನ ಮೃತದೇಹವನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿರಸಲಾಗಿತ್ತು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments