Webdunia - Bharat's app for daily news and videos

Install App

ಮೋದಿ ಆಡಳಿತದಲ್ಲಿ ದೇಶ ಸುರಕ್ಷಿತ: ರಾಜನಾಥ್ ಸಿಂಗ್ ಹೇಳಿಕೆ

Webdunia
ಶುಕ್ರವಾರ, 3 ಸೆಪ್ಟಂಬರ್ 2021 (10:00 IST)
ನವದೆಹಲಿ : ಇಡೀ ದೇಶವೇ ಬೆಚ್ಚಿಬೀಳುವಂತಹ ದೊಡ್ಡ ಮಟ್ಟದ ಉಗ್ರ ದಾಳಿಗಳು ಕಳೆದ ಏಳು ವರ್ಷಗಳಲ್ಲಿ ಒಂದೂ ಕೂಡ ಆಗಿಲ್ಲ. ಆ ಮಟ್ಟಿಗೆ ದೇಶವು ಸುರಕ್ಷಿತವಾಗಿದೆ. ಹಲವು ಕಡೆಗಳಲ್ಲಿ ಉಗ್ರರ ದಾಳಿ ಸಂಚನ್ನು ಮುಂಚಿತವಾಗಿಯೇ ವಿಫಲಗೊಳಿಸಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ.

ಗುಜರಾತಿನಲ್ಲಿ ಮೂರು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. "ಜಮ್ಮು-ಕಾಶ್ಮೀರದಲ್ಲಿನ ಕಾರ್ಯಾಚರಣೆಗಳನ್ನು ಬದಿಗೊತ್ತಿ ನೋಡಿದರೆ ದೇಶದ ಯಾವುದೇ ಮೂಲೆಯಲ್ಲೂ ಕೂಡ ಉಗ್ರರಿಗೆ ಬಾಲಬಿಚ್ಚಲು ಮೋದಿ ಅವಕಾಶವನ್ನೇ ಕೊಟ್ಟಿಲ್ಲ. ಇದು ಸಣ್ಣ ವಿಷಯವಲ್ಲ. ಅದೇ ಕಾಂಗ್ರೆಸ್ ಆಡಳಿತದಲ್ಲಿ ಯೋಧರ ಶೌರ್ಯವನ್ನು ಕೂಡ ಕಡೆಗಣಿಸಿ, ಅವರಿಗೆ ದಕ್ಕಬೇಕಾದ ʼಒನ್ ರ್ಯಾಂಕ್ ಒನ್ ಪೆನ್ಷನ್ʼ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗಿರಲಿಲ್ಲ" ಎಂದು ಸಿಂಗ್ ಟೀಕಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ಹೆಸರನ್ನೇ ಬಂಡವಾಳ ಮಾಡಿಕೊಂಡ ಕಾಂಗ್ರೆಸ್, ಯಾವತ್ತೂ ಕೂಡ ಗಾಂಧಿ ಅವರ ಮಾರ್ಗದಲ್ಲಿ ನಡೆದಿಲ್ಲ. ಆದರೆ ಬಿಜೆಪಿಯು ರಾಮ ಮಂದಿರ ನಿರ್ಮಾಣದಂತಹ ಸಾಂಸ್ಕೃತಿಕ ಭರವಸೆಯಿಂದ ಹಿಡಿದು ಎಲ್ಲ ಭರವಸೆಗಳನ್ನು ಜನರಿಗೆ ಪೂರೈಸಿಕೊಟ್ಟಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ಇದೇ ವೇಳೆ ಮಾತನಾಡಿದ ಗುಜರಾತ್ ಸಿಎಂ ವಿಜಯ್ ರೂಪಾನಿ ಅವರು, 2022ರ ಮಾ.10 ರಿಂದ ನಾಲ್ಕು ದಿನಗಳ ಕಾಲ ಡಿಫೆನ್ಸ್ ಎಕ್ಸ್ಫೋವನ್ನು ಗಾಂಧಿನಗರದಲ್ಲಿ ಆಯೋಜಿಸಲಾಗುವುದು ಎಂದು ಘೋಷಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments