Webdunia - Bharat's app for daily news and videos

Install App

ಮುಂದಿನವಾರ ರಾಜ್ಯಸಭೆಯಲ್ಲಿ ಜಿಎಸ್‌ಟಿ ಮಂಡನೆ

Webdunia
ಶನಿವಾರ, 30 ಜುಲೈ 2016 (13:26 IST)
ಬಹು ನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಸೂದೆ ಮುಂದಿನ ವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.

ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಇದನ್ನು ಖಚಿತ ಪಡಿಸಿದ್ದಾರೆ. ಸಂವಿಧಾನದ 122ನೇ ತಿದ್ದುಪಡಿ ಮಸೂದೆ – 2014ನ್ನು ಮುಂದಿನ ವಾರ ಮೇಲ್ಮನೆಯಲ್ಲಿ ಮಂಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸಚಿವ ಸಂಪುಟ ಜುಲೈ 27ರಂದು ಶೇಕಡ 1ರಷ್ಟು ತಯಾರಿಕಾ ತೆರಿಗೆ ವಿಧಿಸುವ ಅಂಶವನ್ನು ಮಸೂದೆಯಿಂದ ಕೈಬಿಟ್ಟಿತ್ತು. ಅಲ್ಲದೆ, ಜಿಎಸ್‌ಟಿ ವ್ಯವಸ್ಥೆ ಜಾರಿಗೆ ಬಂದ ಮೊದಲ ಐದು ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರಗಳು ಆದಾಯದಲ್ಲಿ ನಷ್ಟ ಅನುಭವಿಸಿದರೆ ಅದಕ್ಕೆ ಪರಿಹಾರ ನೀಡುವ ಭರವಸೆಯನ್ನು ಸಹ ನೀಡಿತ್ತು.

ಆಗಸ್ಟ್ 12 ರಂದು ಅಂತ್ಯಗೊಳ್ಳಲಿರುವ ಮಾನ್ಸೂನ್ ಅಧಿವೇಶನದಲ್ಲಿಯೇ ಜಿಎಸ್‌ಟಿ ಬಿಲ್ ಪಾಸಾಗುವಂತೆ ಮಾಡಲೇಬೇಕೆಂಬ ಇಚ್ಛೆ ಸರ್ಕಾರದ್ದಾಗಿದೆ.

ಮೇ 2015ರಲ್ಲಿಯೇ ಲೋಕಸಭೆಯಲ್ಲಿ ಪಾಸ್ ಆಗಿರುವ ಬಿಲ್, ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಬಹುಮತವಿಲ್ಲದ ಕಾರಣ ಮತ್ತು ಪ್ರಮುಖ ವಿರೋಧ ಪಕ್ಷ  ಮಸೂದೆಯಲ್ಲಿ ಕೆಲ ಬದಲಾವಣೆಗಾಗಿ ಆಗ್ರಹಿಸುತ್ತಿರುವುದರಿಂದ ರಾಜ್ಯಸಭೆಯಲ್ಲಿಯೇ ಸಿಲುಕಿಕೊಂಡಿದೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mangaluru Suhas Shetty murder: ಕಾಶ್ಮೀರದಂತೆ ಕರ್ನಾಟಕದಲ್ಲೇ ಹಿಂದೂಗಳ ಮೇಲೆ ದಾಳಿ ನಡೆಯುತ್ತದೆ: ಬಿವೈ ವಿಜಯೇಂದ್ರ

Gold Price today: ಚಿನ್ನದ ದರ ಇಂದು ಮತ್ತಷ್ಟು ಇಳಿಕೆ

India Pakistan: ಯುದ್ಧ ಮಾಡೋದು ಅಷ್ಟು ಸುಲಭವೇ; ಪಾಕಿಸ್ತಾನದ ಜೊತೆ ಯುದ್ಧ ಮಾಡಿದ್ರೆ ಭಾರತಕ್ಕೆ ಏನಲ್ಲಾ ಲಾಸ್ ಆಗಬಹುದು

Mallikarjun Kharge: ಮಾರಾಯಾ ನಿನ್ನ ಇಂಗ್ಲಿಷ್ ತಗೊಂಡು ನಾವೇನು ಮಾಡೋಣ ಮೋದಿ, ದೇಶಕ್ಕೆ ಭದ್ರತೆ ಕೊಡಿ: ಮಲ್ಲಿಕಾರ್ಜುನ ಖರ್ಗೆ

Karnataka Weather: ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳಿಗೆ ಮಳೆ

ಮುಂದಿನ ಸುದ್ದಿ
Show comments