Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆ ಗೆಲ್ಲಲೇ ಬೇಕೆಂಬ ಜಿದ್ದು ಬಿಜೆಪಿಗೇಕೆ?

Webdunia
ಮಂಗಳವಾರ, 8 ಆಗಸ್ಟ್ 2017 (09:54 IST)
ನವದೆಹಲಿ:  ಸಂಸತ್ತಿನ ಮೇಲ್ಮನೆಯ ಮೂರು ಸ್ಥಾನಗಳಿಗೆ ಗುಜರಾತ್ ನಲ್ಲಿ ನಡೆಯುತ್ತಿರುವ ಚುನಾವಣೆ ದೇಶದ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಅಷ್ಟಕ್ಕೂ ಯಾಕೆ ಈ ಚುನಾವಣೆಗೆ ಇಷ್ಟೆಲ್ಲಾ ಕಸರತ್ತು?

 
ಈ ವರ್ಷಾಂತ್ಯಕ್ಕೆ ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪ್ರಧಾನಿ ಮೋದಿ ತವರೂರು ಗುಜರಾತ್ ನಲ್ಲಿ ಗೆಲ್ಲುವುದು ಬಿಜೆಪಿಗೆ ಪ್ರತಿಷ್ಠೆಯ ವಿಚಾರ.

ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮೋದಿ ಪ್ರಧಾನಿಯಾದ ಮೇಲೆ ಈ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದು. ಆ ಚುನಾವಣೆಗೆ ಮೊದಲು ಪೂರ್ವಭಾವಿ ಚುನಾವಣೆ ಎಂದೇ ಪರಿಗಣಿಸಲಾಗಿರುವ ರಾಜ್ಯಸಭೆ ಚುನಾವಣೆ ಮುಂಬರುವ ಚುನಾವಣೆಯ ದಿಕ್ಸೂಚಿ ಎಂದೇ ಬಿಜೆಪಿ, ಕಾಂಗ್ರೆಸ್ ಅಂದುಕೊಂಡಿದೆ.

ಒಂದೆಡೆ ಸೋನಿಯಾ ಆಪ್ತ ಅಹಮ್ಮದ್ ಪಟೇಲ್ ಇನ್ನೊಂದೆಡೆ ಬಲ್ವಂತ್ ಸಿಂಗ್. ಬಿಜೆಪಿಗೆ ಅಹಮ್ಮದ್ ಪಟೇಲ್ ರನ್ನು ಸೋಲಿಸಿ ಇನ್ನೂ ಗುಜರಾತ್ ನಲ್ಲಿ ತನ್ನ ಪ್ರಾಬಲ್ಯವೇ ಇದೆ ಎಂದು ತೋರಿಸಿಕೊಡಬೇಕು. ಅತ್ತ ಕಾಂಗ್ರೆಸ್ ಗೆ ಅಹಮ್ಮದ್ ಪಟೇಲ್ ರನ್ನು ಗೆಲ್ಲಿಸಿ ಸೋನಿಯಾ ಗಾಂಧಿಯವರ ವಿಶ್ವಾಸ ಮರಳಿಸಬೇಕು.

ಅಲ್ಲದೆ, ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಗೆ ಅಹಮ್ಮದ್ ಪಟೇಲ್ ಗೆದ್ದರೆ, ವಿಧಾನಸಭೆ ಚುನಾವಣೆಗೆ ತಯಾರಾಗಲು ಉತ್ಸಾಹ ಬರುತ್ತದೆ ಎಂಬ ಧಾವಂತ. ಹೀಗಾಗಿ ಇಂದಿನ ಚುನಾವಣೆ ಎರಡೂ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದೆ.

ಇದನ್ನೂ ಓದಿ.. ‘ಕಾಂಗ್ರೆಸ್ ಅಸ್ತಿತ್ವಕ್ಕೇ ಕುತ್ತು ಬಂದಿದೆ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments