Select Your Language

Notifications

webdunia
webdunia
webdunia
webdunia

ರಾಜ್ಯಸಭೆ ಚುನಾವಣೆ ಬಿಜೆಪಿಗೆ ಅಪಾಯದ ಸೂಚನೆಯೇ?

ರಾಜ್ಯಸಭೆ ಚುನಾವಣೆ ಬಿಜೆಪಿಗೆ ಅಪಾಯದ ಸೂಚನೆಯೇ?
ನವದೆಹಲಿ , ಬುಧವಾರ, 9 ಆಗಸ್ಟ್ 2017 (10:17 IST)
ನವದೆಹಲಿ: ರಾಜ್ಯಸಭೆ ಚುನಾವಣೆಯಲ್ಲಿ ಗುಜರಾತ್ ನ ಮೂರೂ ಸೀಟ್ ಗಳನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಬೇಕೆಂದು ಪ್ರಯತ್ನಿಸಿದ್ದ ಬಿಜೆಪಿಗೆ ಸೋಲಾಗಿದೆ.  ಇದು ಗುಜರಾತ್ ನ ಮುಂದಿನ ರಾಜಕೀಯ ಭವಿಷ್ಯದ ಸೂಚನೆಯೇ?

 
ಕೆಲವೇ ತಿಂಗಳುಗಳಲ್ಲಿ ಇಲ್ಲಿ ವಿಧಾನಸಭೆ ಚುನಾವಣೆಯಿದೆ. ಹಾಗಾಗಿ ಅಹಮ್ಮದ್ ಪಟೇಲ್ ರನ್ನು ಸೋಲಿಸಿ ತನ್ನ ಪ್ರಾಬಲ್ಯ ಇನ್ನೂ ರಾಜ್ಯದಲ್ಲಿ ಯಥಾರೀತಿಯಲ್ಲೇ ಇದೆ ಎಂದು ಸಾರಲು ಬಿಜೆಪಿ ಹೊರಟಿತ್ತು. ಅದೀಗ ಸುಳ್ಳಾಗಿದೆ.

ಹೀಗಾಗಿ ಮುಂಬರುವ ಚುನಾವಣೆಗೆ ಬಿಜೆಪಿ ಮತ್ತಷ್ಟು ಪ್ರಯತ್ನ ಪಡುವುದಂತೂ ನಿಜ. ಎಷ್ಟಾದರೂ ಇದು ರಾಜ್ಯಸಭೆ ಚುನಾವಣೆಯಲ್ಲವೇ? ಇದರಿಂದ ಜನರ ಮತ ಯಾರಿಗೆ ಎಂದು ತಿಳಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ಸಮಾಧಾನಪಟ್ಟುಕೊಳ್ಳಬಹುದು.

ಹಾಗಿದ್ದರೂ, ಸತತ ಸೋಲಿನಿಂದ ಕಂಗೆಟ್ಟಿಂದ ಕಾಂಗ್ರೆಸ್ ಗೆ ಈ ಒಂದು ಗೆಲುವು ನೂರಾನೆ ಬಲ ತಂದಿರುತ್ತದೆ. ಇಷ್ಟರವರೆಗೆ ಗುಜರಾತ್ ನಲ್ಲಿ ನರೇಂದ್ರ ಮೋದಿ ಅಲೆಯಲ್ಲಿ ನಿರಾಯಾಸವಾಗಿ ಗೆಲ್ಲುತ್ತಿದ್ದ ಬಿಜೆಪಿಗೆ ಈ ಬಾರಿ ಗೆಲುವು ಅಷ್ಟು ಸುಲಭವಲ್ಲ. ಮೋದಿ ನಂತರ ಮುಖ್ಯಮಂತ್ರಿಯಾಗಿ ಬಂದ ಆನಂದಿ ಬೆನ್ ಮತ್ತು ವಿಜಯ್ ರೂಪಾನಿ ಅಷ್ಟೊಂದು ಪ್ರಭಾವ ಬೀರಿಲ್ಲ. ಇದೆಲ್ಲದರ ಲಾಭ ಪಡೆಯಲು ಕಾಂಗ್ರೆಸ್ ಗೆ ಈ ರಾಜ್ಯಸಭೆ ಚುನಾವಣಾ ಫಲಿತಾಂಶ ಟಾನಿಕ್ ಒದಗಿಸಲಿರುವುದಂತೂ ಖಂಡಿತಾ. ಇದು ಬಿಜೆಪಿ ಆತಂಕಪಡಲೇ ಬೇಕಾದ ವಿಚಾರವಾಗಲಿದೆ.

ಇದನ್ನೂ ಓದಿ.. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ‘ನಾಪತ್ತೆ’!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ‘ನಾಪತ್ತೆ’!