Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆ ಬಿಜೆಪಿಗೆ ಅಪಾಯದ ಸೂಚನೆಯೇ?

Webdunia
ಬುಧವಾರ, 9 ಆಗಸ್ಟ್ 2017 (10:17 IST)
ನವದೆಹಲಿ: ರಾಜ್ಯಸಭೆ ಚುನಾವಣೆಯಲ್ಲಿ ಗುಜರಾತ್ ನ ಮೂರೂ ಸೀಟ್ ಗಳನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಬೇಕೆಂದು ಪ್ರಯತ್ನಿಸಿದ್ದ ಬಿಜೆಪಿಗೆ ಸೋಲಾಗಿದೆ.  ಇದು ಗುಜರಾತ್ ನ ಮುಂದಿನ ರಾಜಕೀಯ ಭವಿಷ್ಯದ ಸೂಚನೆಯೇ?

 
ಕೆಲವೇ ತಿಂಗಳುಗಳಲ್ಲಿ ಇಲ್ಲಿ ವಿಧಾನಸಭೆ ಚುನಾವಣೆಯಿದೆ. ಹಾಗಾಗಿ ಅಹಮ್ಮದ್ ಪಟೇಲ್ ರನ್ನು ಸೋಲಿಸಿ ತನ್ನ ಪ್ರಾಬಲ್ಯ ಇನ್ನೂ ರಾಜ್ಯದಲ್ಲಿ ಯಥಾರೀತಿಯಲ್ಲೇ ಇದೆ ಎಂದು ಸಾರಲು ಬಿಜೆಪಿ ಹೊರಟಿತ್ತು. ಅದೀಗ ಸುಳ್ಳಾಗಿದೆ.

ಹೀಗಾಗಿ ಮುಂಬರುವ ಚುನಾವಣೆಗೆ ಬಿಜೆಪಿ ಮತ್ತಷ್ಟು ಪ್ರಯತ್ನ ಪಡುವುದಂತೂ ನಿಜ. ಎಷ್ಟಾದರೂ ಇದು ರಾಜ್ಯಸಭೆ ಚುನಾವಣೆಯಲ್ಲವೇ? ಇದರಿಂದ ಜನರ ಮತ ಯಾರಿಗೆ ಎಂದು ತಿಳಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ಸಮಾಧಾನಪಟ್ಟುಕೊಳ್ಳಬಹುದು.

ಹಾಗಿದ್ದರೂ, ಸತತ ಸೋಲಿನಿಂದ ಕಂಗೆಟ್ಟಿಂದ ಕಾಂಗ್ರೆಸ್ ಗೆ ಈ ಒಂದು ಗೆಲುವು ನೂರಾನೆ ಬಲ ತಂದಿರುತ್ತದೆ. ಇಷ್ಟರವರೆಗೆ ಗುಜರಾತ್ ನಲ್ಲಿ ನರೇಂದ್ರ ಮೋದಿ ಅಲೆಯಲ್ಲಿ ನಿರಾಯಾಸವಾಗಿ ಗೆಲ್ಲುತ್ತಿದ್ದ ಬಿಜೆಪಿಗೆ ಈ ಬಾರಿ ಗೆಲುವು ಅಷ್ಟು ಸುಲಭವಲ್ಲ. ಮೋದಿ ನಂತರ ಮುಖ್ಯಮಂತ್ರಿಯಾಗಿ ಬಂದ ಆನಂದಿ ಬೆನ್ ಮತ್ತು ವಿಜಯ್ ರೂಪಾನಿ ಅಷ್ಟೊಂದು ಪ್ರಭಾವ ಬೀರಿಲ್ಲ. ಇದೆಲ್ಲದರ ಲಾಭ ಪಡೆಯಲು ಕಾಂಗ್ರೆಸ್ ಗೆ ಈ ರಾಜ್ಯಸಭೆ ಚುನಾವಣಾ ಫಲಿತಾಂಶ ಟಾನಿಕ್ ಒದಗಿಸಲಿರುವುದಂತೂ ಖಂಡಿತಾ. ಇದು ಬಿಜೆಪಿ ಆತಂಕಪಡಲೇ ಬೇಕಾದ ವಿಚಾರವಾಗಲಿದೆ.

ಇದನ್ನೂ ಓದಿ.. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ‘ನಾಪತ್ತೆ’!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments