Webdunia - Bharat's app for daily news and videos

Install App

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವುದು ರಾಮಲಲ್ಲಾನ ಮೂರ್ತಿಯೇ ಅಲ್ಲ!

Krishnaveni K
ಶನಿವಾರ, 20 ಜನವರಿ 2024 (10:59 IST)
Photo Courtesy: Twitter
ಅಯೋಧ್ಯೆ: ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋ ರಾಮಲಲ್ಲಾನದ್ದೇ ಅಲ್ಲ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಸ್ಪಷ್ಟಪಡಿಸಿದ್ದಾರೆ.

ನಿನ್ನೆಯಿಂದ ಕಣ್ಣು ತೆರೆದ ಸ್ಥಿತಿಯಲ್ಲಿರುವ ಮಂದಸ್ಮಿತ ರಾಮನ ಮೂರ್ತಿಯ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದು ರಾಮಲಲ್ಲಾನ ಮೂರ್ತಿ ಎಂದು ಎಲ್ಲರೂ ಹಂಚಿಕೊಳ್ಳುತ್ತಿದ್ದಾರೆ.

ಆದರೆ ನಿಜವಾಗಿಯೂ ಇದು ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಾಗುತ್ತಿರುವ ರಾಮಲಲ್ಲಾನ ಮೂರ್ತಿಯ ಫೋಟೋ ಅಲ್ಲ ಎಂದು ಸತ್ಯೇಂದ್ರ ದಾಸ್ ಸ್ಪಷ್ಟಪಡಿಸಿದ್ದಾರೆ. ಪ್ರಾಣ ಪ್ರತಿಷ್ಠೆಯಾಗುವ ಮುನ್ನ ಬಾಲ ರಾಮನ ಮೂರ್ತಿಯ ಕಣ್ಣುಗಳನ್ನು ತೆರೆಯುವುದಿಲ್ಲ.  ಆದರೆ ನಿಜವಾಗಿಯೂ ಇದು ಅಯೋಧ್ಯೆಯ ಬಾಲರಾಮನ ಫೋಟೋ ಆಗಿದ್ದರೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ರಾಮಜನ್ಮಭೂಮಿ ಟ್ರಸ್ಟ್ ರಾಮಲಲ್ಲಾನ ಮುಚ್ಚಿದ ಸ್ಥಿತಿಯಲ್ಲಿರುವ ಮೂರ್ತಿಯ ಫೋಟೋವೊಂದನ್ನು ಹರಿಯಬಿಟ್ಟಿತ್ತು. ಆದರೆ ಇದಾದ ಕೆಲವೇ ಕ್ಷಣಗಳಲ್ಲಿ ಮೂರ್ತಿಯ ಅನಾವರಣಗೊಳಿಸುವ ಫೋಟೋವೊಂದು ವೈರಲ್ ಆಗಿತ್ತು. ಜನವರಿ 22 ರಂದೇ ಮೂರ್ತಿಯ ನಿಜರೂಪ ದರ್ಶನ ಸಾರ್ವಜನಿಕರಿಗೆ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments