Publish Date: Fri, 07 Oct 2022 (14:29 IST)
Updated Date: Fri, 07 Oct 2022 (14:30 IST)
ಲಕ್ನೋ : ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾಮಗಾರಿ ಶೇ. 50 ರಷ್ಟು ಪೂರ್ಣಗೊಂಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ದೇವಾಲಯದ ಟ್ರಸ್ಟ್ ಪ್ರಕಾರ, 2024 ರಲ್ಲಿ ಮಂಕರ ಸಂಕ್ರಾಂತಿ ದಿನದಂದು ದೇವಾಲಯದ ಗರ್ಭಗುಡಿಯಲ್ಲಿ ರಾಮನ ವಿಗ್ರಹವನ್ನು ಇರಿಸುವ ಸಾಧ್ಯತೆಯಿದೆ. 2020 ರಲ್ಲಿ ಪ್ರಾರಂಭವಾದ ದೇವಾಲಯದ ನಿರ್ಮಾಣವು 2024ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
1949ರಿಂದ ಆಂದೋಲನ ಆರಂಭವಾಗಿದ್ದು, ರಾಮಮಂದಿರದ ಕನಸನ್ನು ನನಸಾಗಿಸಲು ಸಮರ್ಪಣಾ ಪ್ರಯತ್ನಗಳು ನಡೆದಿವೆ. ಈಗ ಈ ಪ್ರಯತ್ನಗಳಿಂದಾಗಿ ದೇವಾಲಯದ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.