Webdunia - Bharat's app for daily news and videos

Install App

ಶೀಘ್ರದಲ್ಲೇ ರಾಮಮಂದಿರ ನಿರ್ಮಾಣ : ಪ್ರವೀಣ ತೊಗಾಡಿಯಾ

Webdunia
ಸೋಮವಾರ, 18 ಆಗಸ್ಟ್ 2014 (12:14 IST)
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವ ಕುರಿತು ಮಾಡಿದ ಪ್ರತಿಜ್ಞೆಯನ್ನು ಶೀಘ್ರದಲ್ಲೇ  ಪೂರೈಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಭಾನುವಾರ ಹೇಳಿದ್ದಾರೆ. 

ಮುಂಬೈನಲ್ಲಿ ನಡೆದ ಸಮಾರಂಭವಂದನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು  ಹುಡುಗಿಯರಿಗಾಗಿ ಮತ್ತು ಯುವ ಜನಾಂಗಕ್ಕಾಗಿ  ದೇಶಾದ್ಯಂತ ಹಾಸ್ಟೆಲ್ ನಿರ್ಮಿಸಲಾಗುವುದು ಅಲ್ಲದೇ  ಬಡ ಹಿಂದುಗಳಿಗೆ ಉಚಿತ ವೈದ್ಯಕೀಯ ಸೌಲಭ್ಯ ದೊರಕಿಸುವ ದಿಶೆಯಲ್ಲಿ ತತ್ಪರರಾಗಲಿದ್ದೇವೆ ಎಂದರು. 
 
ವಿಎಚ್‌ಪಿ ಹೇಳಿಕೆ ಪ್ರಕಾರ  ಧರ್ಮ ಪರಿವರ್ತನೆ ವಿರುದ್ಧ  ಕೇಂದ್ರ ಕಾನೂನು ಜಾರಿಗೆ,  ಸಾಧ್ಯವಾದಷ್ಟು ಪ್ರಯತ್ನಗಳನ್ನು ಕೂಡ ಮಾಡಲಾಗುವುದು ಎಂದು ತೊಗಾಡಿಯಾ ಹೇಳಿದ್ದಾರೆ. 
 
ವಿಎಚ್‌ಪಿ ಮುಂದಿಟ್ಟುಕೊಂಡಿರುವ ಗುರಿಗಳ  ಬಗ್ಗೆ ಮಾತನಾಡುತ್ತಿದ್ದ ಅವರು ರಾಮಮಂದಿರ ನಿರ್ಮಿಸುತ್ತೇವೆ ಎಂದು ನಾವು ಮಾಡಿದ ವಾಗ್ದಾನವನ್ನು ಶೀಘ್ರದಲ್ಲೇ ಕಾರ್ಯರೂಪಕ್ಕೆ ತರಲಿದ್ದೇವೆ ಎಂದರು. 
 
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ  ಆರ್‌ಎಸ್ಎಸ್ ಮುಖಂಡ ಭಾಗ್ವತ್  ಹಿಂದೂ ಸಮಾಜ ತನ್ನ ಧರ್ಮದ  ಮೌಲ್ಯಗಳ ಪ್ರಕಾರ ನಡೆದುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments