ನಾಳೆ ಕೇಂದ್ರ ಸರ್ಕಾರದ ಸಚಿವ ಸಂಪುಟದ ಪುನಾರಚನೆಯಾಗುತ್ತಿದ್ದು, ಬಿಜಾಪುರದ ಸಂಸದ ರಮೇಶ್ ಜಿಗಜಿಗಣಿಗೆ ಅವರಿಗೆ ಸಚಿವ ಸ್ಥಾನ ಸಿಗುವ ಬಹುತೇಕ ಖಚಿತವಾಗಿದೆ. ಬಿಜೆಪಿಯ ಉನ್ನತ ಮೂಲಗಳಿಂದ ಈ ಮಾಹಿತಿ ಬಂದಿದೆ.
ತಕ್ಷಣ ದೆಹಲಿಗೆ ಬಂದು ಭೇಟಿಯಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಿರಿಯ ರಾಜಕಾರಣಿಗೆ ಬುಲಾವ್ ನೀಡಿದ್ದು ಅವರು ದೆಹಲಿ ಕಡೆ ಪ್ರಯಾಣ ಬೆಳೆಸಿದ್ದಾರೆ.
1983ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಹಿಂದುಳಿದ ವರ್ಗದ ನಾಯಕ ಆ ಬಳಿಕ ಹಿಂತಿರುಗಿ ನೋಡಲೇ ಇಲ್ಲ. 64 ವರ್ಷದ ಅವರು ರಾಜಕೀಯದಲ್ಲಿ ಒಂದೊಂದೇ ಮೆಟ್ಟಿಲೇರುತ್ತ ಮುಂದೆ ಸಾಗಿದ್ದಾರೆ.
ಈಗಾಗಲೇ ಕರ್ನಾಟಕದ ಡಿ.ವಿ.ಸದಾನಂದ ಗೌಡ, ಅನಂತ ಕುಮಾರ್, ಜಿ.ಎಂ.ಸಿದ್ಧೇಶ್ವರ್ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.