Webdunia - Bharat's app for daily news and videos

Install App

ಸ್ವಯಂಘೋಷಿತ ದೇವಮಾನವ ರಾಮಪಾಲ್`ಗೆ 2 ಪ್ರಕರಣಗಳಲ್ಲಿ ರಿಲೀಫ್

Webdunia
ಮಂಗಳವಾರ, 29 ಆಗಸ್ಟ್ 2017 (15:33 IST)
ಹರ್ಯಾಣದ ಮತ್ತೊಬ್ಬ ಸ್ವಯಂಘೋಷಿತ ದೇವಮಾನವ ರಾಮ್ ಪಾಲ್`ಗೆ ಎರಡು ಪ್ರಕರಣಗಳಲ್ಲಿ ಹರ್ಯಾಣದ ಹಿಸಾರ್ ಕೋರ್ಟ್ ಕ್ಲೀನ್ ಚಿಟ್ ನೀಡಿದೆ. 2014ರ ಗಲಭೆ ಮತ್ತು ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಯನ್ನುಂಟು ಮಾಡಿದ ಆರೋಪ ಪ್ರಕರಣಗಳಲ್ಲಿ ರಾಮ್ ಪಾಲ್ ಖುಲಾಸೆಯಾಗಿದ್ದಾರೆ.
 

 ಆದರೆ, ರಾಮ್ ಪಾಲ್ ಈಗಲೇ ಜೈಲಿನಿಂದ ಹೊರ ಹೋಗುವುದು ಸಾಧ್ಯವಿಲ್ಲ. ದೇಶದ್ರೋಹ, ಕೊಲೆ ಸೇರಿದಂತೆ ಹಲವು ಪ್ರಕರಣಗಳು ರಾಮ್ ಪಾಲ್ ವಿರುದ್ಧ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ. ನವೆಂಬರ್ 18, 2014ರಂದು ರಾಮ್ ಪಾಲ್ ವಿರುದ್ಧ ಐಪಿಸಿ ಸೆಕ್ಷನ್ಸ್ 186, 332 ಮತ್ತು 353ರ ಅಡಿ ಪ್ರಕರಣ ದಾಖಲಾಗಿತ್ತು.  ಹಿಸಾರ್ ಸೆಂಟ್ರಲ್ ಜೈಲಿನಲ್ಲಿ ಸ್ಥಾಪಿಸಲಾಗಿರುವ ವಿಶೇಷ ಕೋರ್ಟ್`ನಲ್ಲಿ ವಿಚಾರಣೆ ನಡೆದಿದೆ. ಕೋರ್ಟ್`ನಲ್ಲಿ ರಾಮ್ ಪಾಲ್ ವಿಚಾರಣೆಗೆ ಬಂದಾಗಲೆಲ್ಲ ಅಪಾರ ಪ್ರಮಾಣದಲ್ಲಿ ಸೇರುವ ಬೆಂಬಲಿಗರು ಗಲಾಟೆ ಮಾಡುತ್ತಾರೆ. ಹೀಗಾಗಿಯೇ, ಈ ಬಾರಿ ಭಾರೀ ಭದ್ರತೆ ಕೈಗೊಳ್ಳಲಾಗಿತ್ತು.

ಆಗಸ್ಟ್ 24ರಂದೇ ಈ ಎರಡೂ ಪ್ರಕರಣಗಳ ತೀರ್ಪು ಹೊರಬೀಳಬೇಕಿತ್ತು. ಆದರೆ, ಆಗಸ್ಟ್ 25ಕ್ಕೆ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪ್ರಕರಣದ ತೀರ್ಪು ಸಿಬಿಐ ಕೋರ್ಟ್`ನಲ್ಲಿ ನಿಗದಿಯಾಗಿದ್ದರಿಂದ ಪೊಲೀಸರ ಮನವಿ ಮೇರೆಗೆ ತೀರ್ಪನ್ನ ಇಂದಿಗೆ ಮುಂದೂಡಲಾಗಿತ್ತು. ರಾಮಪಾಲ್ ವಿರುದ್ಧ ಇನ್ನೂ ಎರಡು ಪ್ರಕರಣಗಳು ಬಾಕಿ ಉಳಿದಿದ್ದು, ಸದ್ಯ ಜೈಲಿನಲ್ಲೇ ಇರಬೇಕಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments