Webdunia - Bharat's app for daily news and videos

Install App

ಪುಲ್ವಾಮಾ ದಾಳಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ಅವಘಡವನ್ನು ಲಿಂಕ್ ಮಾಡಿದ ರಮ್ಯಾಗೆ ಟ್ವಿಟರಿಗರ ತರಾಟೆ

Webdunia
ಭಾನುವಾರ, 17 ಫೆಬ್ರವರಿ 2019 (09:18 IST)
ಬೆಂಗಳೂರು: ಪುಲ್ವಾಮಾ ದಾಳಿ ವಿಚಾರದಲ್ಲೂ ಕೇಂದ್ರ ಸರ್ಕಾರವನ್ನು ಟೀಕಿಸಲು ಹೊರಟ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾಗೆ ಟ್ವಿಟರಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.


ಪುಲ್ವಾಮಾ ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮೊದಲ ದಿನವೇ ಸಣ್ಣದೊಂದು ಅವಘಡಕ್ಕೀಡಾಗಿತ್ತು. ಇದನ್ನೇ ನೆಪ ಮಾಡಿ ರಮ್ಯಾ ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಡಲು ಮುಂದಾಗಿದ್ದರು.

ನಮ್ಮ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಪ್ರಕಾರ ಪುಲ್ವಾಮಾ ದಾಳಿಗೆ ಇದೇ ರೀತಿ ಉತ್ತರ ಕೊಡಬೇಕಿತ್ತು ಎಂದು ರೈಲ್ವೇ ವೈಫಲ್ಯಕ್ಕೂ ಪುಲ್ವಾಮಾ ದಾಳಿಗೂ ಲಿಂಕ್ ಕೊಡಲು ರಮ್ಯಾ ಮುಂದಾಗಿದ್ದರು. ಇದನ್ನು ನೋಡಿ ಹಲವರು ಪ್ರತಿಕ್ರಿಯಿಸಿದ್ದು, ಈ ರೀತಿ ಹುಳುಕು ಹುಡುಕಿ ಕಾಮೆಂಟ್ ಮಾಡಲು ನಿಮಗೆ ನಾಚಿಕೆಯಾಗಲ್ವೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸರಿಯಾಗಿ ಸುದ್ದಿ ತಿಳಿದುಕೊಂಡು ಮಾತನಾಡಿ. ಇಷ್ಟೊಂದು ಕೀಳುಮಟ್ಟಕ್ಕಿಳಿದು ಮಾತನಾಡಲು ನಾಚಿಕೆಯಾಗಲ್ವೇ? ನಮ್ಮ ಇಂಜಿನಿಯರಿಂಗ್ ಸಾಮರ್ಥ್ಯದ ಬಗ್ಗೆಯೇ ಲೇವಡಿ ಮಾಡುತ್ತೀರಾ? ಇದು ಚುನಾವಣೆ ವಿಷಯವಲ್ಲ. ಸಾಧ್ಯವಾದರೆ ನಮ್ಮ ಯೋಧರಿಗೆ ಒಂದೆರಡು ಹನಿ ಕಣ್ಣೀರು ಹಾಕಿ ಎಂದು ರಮ್ಯಾರನ್ನು ಟ್ವಿಟರಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments