Webdunia - Bharat's app for daily news and videos

Install App

ಪುಲ್ವಾಮಾ ದಾಳಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ಅವಘಡವನ್ನು ಲಿಂಕ್ ಮಾಡಿದ ರಮ್ಯಾಗೆ ಟ್ವಿಟರಿಗರ ತರಾಟೆ

Webdunia
ಭಾನುವಾರ, 17 ಫೆಬ್ರವರಿ 2019 (09:18 IST)
ಬೆಂಗಳೂರು: ಪುಲ್ವಾಮಾ ದಾಳಿ ವಿಚಾರದಲ್ಲೂ ಕೇಂದ್ರ ಸರ್ಕಾರವನ್ನು ಟೀಕಿಸಲು ಹೊರಟ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾಗೆ ಟ್ವಿಟರಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.


ಪುಲ್ವಾಮಾ ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮೊದಲ ದಿನವೇ ಸಣ್ಣದೊಂದು ಅವಘಡಕ್ಕೀಡಾಗಿತ್ತು. ಇದನ್ನೇ ನೆಪ ಮಾಡಿ ರಮ್ಯಾ ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಡಲು ಮುಂದಾಗಿದ್ದರು.

ನಮ್ಮ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಪ್ರಕಾರ ಪುಲ್ವಾಮಾ ದಾಳಿಗೆ ಇದೇ ರೀತಿ ಉತ್ತರ ಕೊಡಬೇಕಿತ್ತು ಎಂದು ರೈಲ್ವೇ ವೈಫಲ್ಯಕ್ಕೂ ಪುಲ್ವಾಮಾ ದಾಳಿಗೂ ಲಿಂಕ್ ಕೊಡಲು ರಮ್ಯಾ ಮುಂದಾಗಿದ್ದರು. ಇದನ್ನು ನೋಡಿ ಹಲವರು ಪ್ರತಿಕ್ರಿಯಿಸಿದ್ದು, ಈ ರೀತಿ ಹುಳುಕು ಹುಡುಕಿ ಕಾಮೆಂಟ್ ಮಾಡಲು ನಿಮಗೆ ನಾಚಿಕೆಯಾಗಲ್ವೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸರಿಯಾಗಿ ಸುದ್ದಿ ತಿಳಿದುಕೊಂಡು ಮಾತನಾಡಿ. ಇಷ್ಟೊಂದು ಕೀಳುಮಟ್ಟಕ್ಕಿಳಿದು ಮಾತನಾಡಲು ನಾಚಿಕೆಯಾಗಲ್ವೇ? ನಮ್ಮ ಇಂಜಿನಿಯರಿಂಗ್ ಸಾಮರ್ಥ್ಯದ ಬಗ್ಗೆಯೇ ಲೇವಡಿ ಮಾಡುತ್ತೀರಾ? ಇದು ಚುನಾವಣೆ ವಿಷಯವಲ್ಲ. ಸಾಧ್ಯವಾದರೆ ನಮ್ಮ ಯೋಧರಿಗೆ ಒಂದೆರಡು ಹನಿ ಕಣ್ಣೀರು ಹಾಕಿ ಎಂದು ರಮ್ಯಾರನ್ನು ಟ್ವಿಟರಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments