Select Your Language

Notifications

webdunia
webdunia
webdunia
webdunia

ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಅತ್ಯಾಚಾರ

ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಅತ್ಯಾಚಾರ
ನವದೆಹಲಿ , ಮಂಗಳವಾರ, 31 ಆಗಸ್ಟ್ 2021 (09:02 IST)
ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿ ಆ ಬಾಲಕಿಯು ಗರ್ಭ ಧರಿಸಲು ಕಾರಣನಾದ ಯುವಕನೊಬ್ಬನಿಗೆ ನಾಗ್ಪುರ ನ್ಯಾಯಾಲಯ ಸೋಮವಾರ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕ್ರೂರ ಆರೋಪಿಯನ್ನು ಕಟೋಲ್ ನಿವಾಸಿ ಆಕಾಶ್ ಯೆದಾನಿ (23) ಎಂದು ಹೇಳಲಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಕೆ.ಜಿ.ರಥಿ ಅವರು ಐಪಿಸಿ ಸೆಕ್ಷನ್ 376 (2) (3), 506 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೆಕ್ಷನ್ 5 ರ ಅಡಿಯಲ್ಲಿ ಇವರಿಗೆ ಶಿಕ್ಷೆ ನೀಡಲಾಗುತ್ತಿದೆ ಎಂದು ಹೇಳಿದರು. ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ರಶ್ಮಿ ಖಪರ್ಡೆ ಸಂತ್ರಸ್ತೆಯ ಪರ ವಕಾಲತ್ತು ವಹಿಸಿದ್ದರು.
ಅತ್ಯಾಚಾರ ಆರೋಪಿಯು ಮಾನಸಿಕ ಅಸ್ವಸ್ಥ 16 ವರ್ಷದ ಯುವತಿಯು ಮನೆಯಲ್ಲಿ ಒಬ್ಬಳೇ ಇದ್ದಾಗ ಸಮಯ ನೋಡಿಕೊಂಡು ಹಲವು ಬಾರಿ ಅತ್ಯಾಚಾರ ಮಾಡಿದ್ದಾನೆ. ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದಾನೆ, ಅನೇಕ ದಿನಗಳ ನಂತರ ಬಾಲಕಿಯ ಪೋಷಕರಿಗೆ ಈ ವಿಚಾರ ತಿಳಿದಿದೆ,  ನಂತರ ನವೆಂಬರ್ 11, 2018 ರಂದು ಕೊಂಡಾಳಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಯಿತು ಎಂದು ಪೊಲೀಸ್ ಅಧಿಕಾರಿ ಖಪರ್ಡೆ ಪಿಟಿಐಗೆ ತಿಳಿಸಿದರು.
ಈ ಅಪರಾಧಿಗೆ ನ್ಯಾಯಾಲಯವು 20,000 ರೂಪಾಯಿ ದಂಡವನ್ನು ವಿಧಿಸಿದೆ ಎಂದು ಅವರು ಹೇಳಿದರು. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ಸಿಆರ್ಬಿ) ಬಿಡುಗಡೆ ಮಾಡಿದ  ಮಾಹಿತಿಯ ಪ್ರಕಾರ, 2019ರಲ್ಲಿ ಭಾರತದಲ್ಲಿ ನಿತ್ಯ 95 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ವರ್ಷದಲ್ಲಿ ಒಟ್ಟು 32,033 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ.
2018-19ರಿಂದ ಮಹಿಳೆಯರ ಮೇಲಿನ ಶೋಷಣೆಗಳು 7.3% ಹೆಚ್ಚಳ. ಮಹಿಳೆಯರ ಮೇಲೆ ಅತಿ ಹೆಚ್ಚು ದೌರ್ಜನ್ಯ ಪ್ರಮಾಣವನ್ನು ಅಸ್ಸಾಂ  ರಾಜ್ಯದಲ್ಲಿ ದಾಖಲಾಗಿದೆ.  ಮಹಿಳೆಯರ ಮೇಲೆ ಅತಿಹೆಚ್ಚು ದೌರ್ಜನ್ಯ ಉತ್ತರಪ್ರದೇಶದಲ್ಲಿ ನಡೆದಿದೆ ಈವರೆಗೂ 59,853 ಘಟನೆಗಳು ನಡೆದಿವೆ. ರಾಜಸ್ಥಾನದಲ್ಲಿ ಈವರೆಗೆ 5,997 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.
ಭಾರತದಲ್ಲಿ ನಿತ್ಯ 10 ದಲಿತ ಮಹಿಳೆಯರು ಅತ್ಯಾಚಾರಕ್ಕೊಳಗಾಗುತ್ತಾರೆ (2019ರಲ್ಲಿ ಸುಮಾರು 3,500 ದಲಿತ ಮಹಿಳೆಯರು ಅತ್ಯಾಚಾರಕ್ಕೊಳಗಾಗಿದ್ದಾರೆ). ಇದರಲ್ಲಿ ಮೂರನೇ ಒಂದು ಭಾಗ ಪ್ರಕರಣಗಳು ರಾಜಸ್ಥಾನ ಮತ್ತು ಉತ್ತರಪ್ರದೇಶದಿಂದ ವರದಿಯಾಗಿವೆ. ರಾಜಸ್ಥಾನದಲ್ಲಿ ಅತಿ ಹೆಚ್ಚು ಅಂದರೆ 554 ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆದಿವೆ. ಉತ್ತರಪ್ರದೇಶದಲ್ಲಿ 537 ಮತ್ತು ಮಧ್ಯಪ್ರದೇಶದಲ್ಲಿ 510 ಪ್ರಕರಣಗಳು ದಾಖಲಾಗಿವೆ. ಕೇರಳದಲ್ಲಿ ಅತಿಹೆಚ್ಚು ಅಂದರೆ 4.6ರಷ್ಟು ದಲಿತ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಯುಪಿಯಲ್ಲಿ 4.5 ಮತ್ತು ರಾಜಸ್ಥಾನ 4.5 ರಷ್ಟು ದಲಿತ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ.


Share this Story:

Follow Webdunia kannada

ಮುಂದಿನ ಸುದ್ದಿ

50 ಲಕ್ಷ ಮರ ಬೆಳೆಸುವ ಯೋಜನೆಗೆ ಡ್ರೋಣ್ ಬಳಸಲು ಯೋಜನೆ ರೂಪಿಸಿದ ತೆಲಂಗಾಣ