Daily Horoscope

ಭಕ್ತೆ ಮೇಲೆ ಅತ್ಯಾಚಾರ! ವೈರಾಗ್ಯಾನಂದ ಅರೆಸ್ಟ್

Webdunia
ಬುಧವಾರ, 10 ಆಗಸ್ಟ್ 2022 (09:02 IST)
ಭೋಪಾಲ್ : ಮಧ್ಯಪ್ರದೇಶದ ರಾಜಧಾನಿಯಲ್ಲಿ ಮಹಿಳಾ ಭಕ್ತೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಗಿರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮಿ ವೈರಾಗ್ಯಾನಂದ ಗಿರಿ ಅವರನ್ನು ಗ್ವಾಲಿಯರ್ನಲ್ಲಿ ಬಂಧಿಸಿದ್ದು, ಅವರನ್ನು ಭೋಪಾಲ್ಗೆ ಕರೆತರಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಎಸಿಪಿ) ರಿಚಾ ಚೌಬೆ ತಿಳಿಸಿದ್ದಾರೆ. 

ಜುಲೈ 17 ರಂದು ಆರೋಪಿ ದೇವಮಾನವ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೋಮವಾರ ಭಕ್ತೆ ದೂರು ನೀಡಿ ನೀಡಿದ್ದಾರೆ.

ಮದುವೆಯಾಗಿ ಬಹಳ ದಿನಗಳಿಂದ ಮಕ್ಕಳಾಗಿರಲಿಲ್ಲ. ಕೆಲವು ವಿಧಿವಿಧಾನಗಳ ಮೂಲಕ ಗರ್ಭಿಣಿಯಾಗುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ವೈರಾಗ್ಯಾನಂದರ ಆಶೀರ್ವಾದ ಪಡೆಯಲು ಹೋಗಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ವೈರಾಗ್ಯಾನಂದ ನೀಡಿದ ನೈವೇದ್ಯವನ್ನು ಸೇವಿಸಿ ಮೂರ್ಛೆ ಹೋದಾಗ ದೇವಮಾನವ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಸಾಮಾಜಿಕ ಕಳಂಕದ ಭಯದಿಂದ ತಕ್ಷಣ ದೂರು ನೀಡಲು ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments