Webdunia - Bharat's app for daily news and videos

Install App

ಶಿಕ್ಷಕರಿಂದಲೇ ಅತ್ಯಾಚಾರಕ್ಕೊಳಗಾದ ಬಳಿಕ ಅಮ್ಮ ಬೇಕು ಎಂದು ಅಳುತ್ತಿದ್ದ ಬಾಲಕಿ!

Webdunia
ಸೋಮವಾರ, 4 ಡಿಸೆಂಬರ್ 2017 (08:56 IST)
ಕೋಲ್ಕೊತ್ತಾ: ಇಲ್ಲಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕರಿಂದಲೇ ಅತ್ಯಾರಕ್ಕೊಳಗಾದ ಬಾಲಕಿ ದಿನವಿಡೀ ಅಮ್ಮ ಬೇಕೆಂದು ಅಳುತ್ತಿದ್ದಳಂತೆ!
 

ಶೌಚಾಲಯಕ್ಕೆ ಹೋಗಿ ಮರಳಿದ ಬಾಲಕಿ ನನಗೆ ಅಮ್ಮ ಬೇಕು. ಅಮ್ಮನ ಬಳಿ ಹೋಗಲು ಬಿಡಿ ಎಂದು ಅಳುತ್ತಿದ್ದಳಂತೆ. ಹೀಗಂತ ಆಕೆಯ ಸಹಪಾಠಿಗಳೇ ಹೇಳಿದ್ದಾರೆ. ಆದರೆ ಶಾಲೆಯವರು ಆಕೆಯ ಅಳುವಿಗೆ ಕಾರಣ ಹುಡುಕಲು ಹೋಗಿಲ್ಲ.

ಆದರೆ ಸಂಜೆ ವೇಳೆಗೆ ಸಂತ್ರಸ್ತೆಯ ತಾಯಿ ಮಗಳನ್ನು ಮನೆಗೆ ಕರೆದುಕೊಂಡು ಹೋಗಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಆಕೆಯ ಸಮವಸ್ತ್ರದಲ್ಲಿ ರಕ್ತದ ಕಲೆಯಿದ್ದುದು ಕಂಡು ಪೋಷಕರು ವೈದ್ಯರಿಗೆ ತೋರಿಸಿದಾಗ ಒಂದಕ್ಕಿಂತ ಹೆಚ್ಚು ಮಂದಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರಬಹುದು ಎಂದು ತಿಳಿದು ಬಂದಿದೆ.

ವಿಚಾರಣೆಯ ನಂತರ ಘಟನೆಯಲ್ಲಿ ಶಾಲೆಯ ದೈಹಿಕ ಶಿಕ್ಷಕರ ಪಾತ್ರವಿರುವುದು ತಿಳಿದುಬಂದಿದೆ. ಇದೀಗ ಇಬ್ಬರನ್ನೂ ಬಂಧಿಸಲಾಗಿದ್ದು, ಶಾಲೆಯೂ ಇವರನ್ನು ಅಮಾನತುಗೊಳಿಸಿದೆ. ಇದೀಗ ಶಾಲೆಯ ವಿರುದ್ಧ ಪೋಷಕರು ಪ್ರತಿಭಟನೆ ನಡೆಸುತ್ತಿದ್ದು, ಅನಿರ್ದಿಷ್ಟಾವಧಿಗೆ ಶಾಲೆ ಬಂದ್ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ