Webdunia - Bharat's app for daily news and videos

Install App

ಮುಖ್ಯಮಂತ್ರಿಗೆ ರಕ್ತ ಪತ್ರ ಬರೆದ ರೇಪ್ ಪೀಡಿತೆ

Webdunia
ಶುಕ್ರವಾರ, 26 ಆಗಸ್ಟ್ 2016 (09:48 IST)
ಕರ್ನಾಲ್ ನಿವಾಸಿಯಾದ ಅತ್ಯಾಚಾರ ಸಂತ್ರಸ್ತೆಯೋರ್ವಳು ನ್ಯಾಯ ಕೋರಿ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಕಟ್ಟರ್ ಅವರಿಗೆ ರಕ್ತದಿಂದ ಪತ್ರ ಬರೆದಿದ್ದಾಳೆ.

ರಾಷ್ಟ್ರೀಯ ಸುದ್ದಿ ವಾಹಿನಿಯೊಂದರಲ್ಲಿ ಪ್ರಕಟವಾಗಿರುವ ವರದಿಯ ಪ್ರಕಾರ ಪೀಡಿತೆ ಆರೋಪಿಯನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾಳೆ.
 
ವರದಿಗಳ ಪ್ರಕಾರ ಯುವತಿಗೆ ರವಿ ಎಂಬಾತನ ಜತೆಗೆ 2009ರಲ್ಲಿ ನಿಶ್ಚಿತಾರ್ಥವಾಗಿತ್ತು. ಆದರೆ ಕೆಲವು ಕಾರಣಗಳಿಂದ ಮದುವೆ ಮುರಿದು ಬಿದ್ದಿತ್ತು.
 
ಆದರೆ ಆತ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರಿಂದ ಯುವತಿ ಕಂಗಾಲಾದಳು. ತಕ್ಷಣ ರವಿ ಮತ್ತು ಆತನ ಸಹೋದರನ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಳು. ಆದರೆ ಇಲ್ಲಿಯವರೆಗೆ ಯಾರ ಬಂಧನವೂ ಆಗಿಲ್ಲ.
 
ನ್ಯಾಯ ಸಿಗದೆ ಬೇಸತ್ತಿದ್ದ ಯುವತಿ ಈಗ ಸಿಎಂ ಕಟ್ಟರ್ ಅವರಿಗೆ ಪತ್ರ ಬರೆದು ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾಳೆ. ಆರೋಪಿಗಳ ಕುಟುಂಬ ದೂರನ್ನು ಹಿಂಪಡೆಯುವಂತೆ ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ. ಜತೆಗೆ ನನ್ನ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ. ನನಗೆ ನ್ಯಾಯ ಸಿಗದಿದ್ದರೆ ಆತ್ಮಹತ್ಯೆಗೆ ಶರಣಾಗುವುದಾಗಿ ಆಕೆ ಬೆದರಿಕೆ ಒಡ್ಡಿದ್ದಾಳೆ.
 
ಯುವತಿಯ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments