Webdunia - Bharat's app for daily news and videos

Install App

ಚಂಪೈ ಸೊರೇನ್‌ ಬಿಜೆಪಿ ಕದ ತಟ್ಟಿದ ಬೆನ್ನಲ್ಲೇ ಜಾರ್ಖಂಡ್‌ ಸಂಪುಟದಲ್ಲಿ ಕ್ಷೀಪ್ರ ಬದಲಾವಣೆ

Sampriya
ಶುಕ್ರವಾರ, 30 ಆಗಸ್ಟ್ 2024 (14:07 IST)
Photo Courtesy X
ರಾಂಚಿ: ಜಾರ್ಖಂಡ್ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಕ್ಷೀಪ್ರ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಶಾಸಕ ರಾಮ್‌ದಾಸ್ ಸೊರೇನ್ ಇಂದು ಪ್ರಮಾಣವಚನ ಸ್ವೀಕರಿಸಿದರು.

ಮಾಜಿ ಮುಖ್ಯಮಂತ್ರಿ, ಮಾಜಿ ಸಚಿವ ಚಂಪೈ ಸೊರೇನ್ ಅವರು ಬಿಜೆಪಿಯ ಕದ ತಟ್ಟಿದ ಬೆನ್ನಲ್ಲೇ ಅವರ ಸ್ಥಾನಕ್ಕೆ ರಾಮ್‌ದಾಸ್ ಆಯ್ಕೆಯಾಗಿದ್ದಾರೆ. ರಾಜಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಮ್‌ದಾಸ್ ಅವರಿಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರತಿಜ್ಞಾವಿಧಿ ಬೋಧಿಸಿದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದ ಹೇಮಂತ್ ಸೊರೇನ್ ಜನವರಿ 31ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಐದು ತಿಂಗಳ ಬಳಿಕ ಅವರು ಜೂನ್ 28ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.

ಫೆಬ್ರುವರಿ 2ರಂದು ಚಂಪೈ ಸೊರೇನ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು. ಜುಲೈ 3ರಂದು ರಾಜೀನಾಮೆ ಸಲ್ಲಿಸಿದ್ದರು. ಜೈಲಿನಿಂದ ಬಿಡುಗಡೆಯಾಗಿದ್ದ ಹೇಮಂತ್ ಸೊರೇನ್ ಜುಲೈ 4ರಂದು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಮತ್ತೊಂದೆಡೆ ಪಕ್ಷ ತೊರೆದಿರುವ ಚಂಪೈ ಸೊರೇನ್, ಬಿಜೆಪಿಗೆ ಸೇರುವುದು ಬಹುತೇಕ ಖಚಿತವೆನಿಸಿದೆ. ಮೂಲಗಳ ಪ್ರಕಾರ ಅವರು ಇಂದೇ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments