ಇವನೊಬ್ಬ ಕಾಮಕ್ರಿಮಿ, ಇವನ ಕಾಮದಾಟ ಕೇಳಿದ್ರೆ ಬೆಚ್ಚಿ ಬೀಳ್ತಿರಿ(ವಿಡಿಯೋ ನೋಡಿ)

Webdunia
ಶುಕ್ರವಾರ, 17 ನವೆಂಬರ್ 2017 (19:24 IST)
ಸುಮಾರು 50ಕ್ಕೂ ಹೆಚ್ಚು ಏಕಾಂಗಿ ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಹಣ, ಚಿನ್ನ ಲೂಟಿ ಮಾಡಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
28 ವರ್ಷ ವಯಸ್ಸಿನ ಆರೋಪಿ ಮದನ್ ಅರಿವಲಗಮ್, ಮನೆಯಲ್ಲಿ ಮಹಿಳೆಯರು ಏಕಾಂಗಿಯಾಗಿದ್ದಾಗ ಮನೆಗೆ ನುಗ್ಗಿ ಅವರನ್ನು ಬೆದರಿಸಿ ಅತ್ಯಾಚಾರವೆಸಗುತ್ತಿದ್ದ. ಅತ್ಯಾಚಾರವೆಸಗುವ ವಿಡಿಯೋ ತೆಗೆದು ಹಣ ನೀಡದಿದ್ದಲ್ಲಿ ಇಂಟರ್‌ನೆಟ್‌ನಲ್ಲಿ ಹಾಕುವ ಬೆದರಿಕೆಯೊಡ್ಡುತ್ತಿದ್ದ ಎಂದ ಪೊಲೀಸ್ ಮೂಲಗಳು ತಿಳಿಸಿವೆ.
 
ಅತ್ಯಾಚಾರಕ್ಕೊಳಗಾದ ಮಹಿಳೆಯರು, ಯುವತಿಯರು ಮರ್ಯಾದೆಗೆ ಹೆದರಿ ಪೊಲೀಸರಿಗೆ ದೂರು ನೀಡುತ್ತಿರಲಿಲ್ಲ. ಇದರಿಂದ ಮತ್ತಷ್ಟು ಉತ್ತೇಜಿತಗೊಂಡ ಆರೋಪಿ ಮದನ್, ಅತ್ಯಾಚಾರ ಮಾಡುವುದನ್ನೇ ಕಾಯಕವಾಗಿಸಿಕೊಂಡಿದ್ದ.
 
ಆದರೆ, ಆರೋಪಿ ಮದನ್ ದುರಾದೃಷ್ಟ ಹೆಗಲೇರಿತ್ತು. ಸಾಫ್ಟ್‌ವೇರ್ ಇಂಜಿನಿಯರ್‌ರೊಬ್ಬರು ಒಬ್ಬ ವ್ಯಕ್ತಿ ತಮ್ಮಿಂದ 8500 ರೂಪಾಯಿ ಹಣವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ ಎಂದು ದೂರು ನೀಡಿದ್ದರು. ದೂರಿನ ತನಿಖೆ ನಡೆಸಿದಾಗ ಸಿಸಿಟಿವಿ ಆಧಾರದ ಮೇಲೆ ಆರೋಪಿ ಮದನ್‌ನನ್ನು ವಶಕ್ಕೆ ತೆಗೆದುಕೊಂಡಿದ್ದರು. 
 
ಕೃಷ್ಣಗಿರಿ ಜಿಲ್ಲೆಯ ಮತ್ತೂರ್ ಮೂಲದ ಮದನ್ ಬಂಧಿಸಿ ಮೊಬೈಲ್ ವಶಪಡಿಸಿಕೊಂಡು ಪರಿಶೀಲಿಸಿದಾಗ ಅದರಲ್ಲಿರುವ ಹಲವು ಮಹಿಳೆಯರ ರೇಪ್ ವಿಡಿಯೋಗಳನ್ನು ನೋಡಿ ಪೊಲೀಸರಿಗೆ ಆಘಾತ ಎದುರಾಗಿತ್ತು.
 
ಪೊಲೀಸರು ತಮ್ಮ ಭಾಷೆಯಲ್ಲಿಯೇ ಮದನ್ ವಿಚಾರಣೆ ನಡೆಸಿದಾಗ ಹಲವಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾಗಿ ತಿಳಿಸಿದ್ದಾನೆ. ಪ್ರತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರವೆಸಗಿದಾಗ ವಿಡಿಯೋ ಮಾಡಿಕೊಳ್ಳುವುದು ಆತನ ಹವ್ಯಾಸವಾಗಿತ್ತು. ವಿಡಿಯೋಗಳನ್ನು ಮಹಿಳೆಯರಿಗೆ ತೋರಿಸಿ ಮತ್ತೊಮ್ಮೆ ಮಗದೊಮ್ಮೆ ಅತ್ಯಾಚಾರವೆಸಗುತ್ತಿದ್ದ.
 
ಪೊಲೀಸರು ಆರೋಪಿ ಮದನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments