Webdunia - Bharat's app for daily news and videos

Install App

ಕ್ಷಮೆ ಕೇಳುವವರೆಗೂ ವಿಮಾನ ಹತ್ತಲು ಬಿಡಲ್ಲ: ಗಾಯಕ್ವಾಡ್ ಟಿಕೆಟ್ ರದ್ದು ಮಾಡಿದ ಏರ್ ಇಂಡಿಯಾ

Webdunia
ಶುಕ್ರವಾರ, 7 ಏಪ್ರಿಲ್ 2017 (12:02 IST)
ಮಾರ್ಚ್ 23ರಂದು ಏರ್ ಇಂಡಿಯಾ ಮ್ಯಾನೇಜರ್`ಗೆ ಚಪ್ಪಲಿಯಿಂದ ಹೊಡೆದ ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್`ಗೆ ಏರ್ ಇಂಡಿಯಾ  ಸಿಬ್ಬಂದಿ ಬಿಸಿ ಮುಟ್ಟಿಸಿದ್ದಾರೆ. ಗಾಯಕ್ವಾಡ್ ಬುಕ್ ಮಾಡಿದ್ದ ಏರ್ ಟಿಕೆಟನ್ನ ಮತ್ತೆ ರದ್ದುಗೊಳಿಸಲಾಗಿದೆ. ಈ ತಿಂಗಳಾಂತ್ಯಕ್ಕೆ ಮುಂಬೈನಿಂದ ದೆಹಲಿ ಪ್ರಯಾಣಕ್ಕೆ ಗಾಯಕ್ವಾಡ್ ಏರ್ ಟಿಕೆಟ್ ಬುಕ್ ಮಾಡಿದ್ದರು.

ಗಾಯಕ್ವಾಡ್ ಬೇಷರತ್ ಕ್ಷಮೆ ಕೋರಬೇಕು ಮತ್ತು ಸಿಬ್ಬಂದಿಯ ಕ್ಷೇಮದ ದೃಷ್ಟಿಯಿಂದ ನಿಯಮಾವಳಿಗಳನ್ನ ಪಾಲಿಸುತ್ತೇನೆಂದು ಲಿಖಿತವಾಗಿ ಬರೆದುಕೊಡಬೇಕು. ಅಲ್ಲಿವರೆಗೂ ವಿಮಾನ ಹತ್ತಲು ಅವಕಾಶ ನೀಡಬಾರದೆಂದು ಏರ್ ಇಂಡಿಯಾ ಸಿಬ್ಬಂದಿ ಒತ್ತಾಯಿಸಿದ್ದಾರೆ.

ನಿನ್ನೆ ಈ ಕುರಿತು ಲೋಕಸಭೆಯಲ್ಲಿ ಪ್ರತಿಕ್ರಿಯಿಸಿದ್ದ ರವಿಂದ್ರ ಗಾಯಕ್ವಾಡ್, ಲೋಕಸಭೆಗೆ ಮಾತ್ರ ನಾನು ಕ್ಷಮೆ ಕೋರುತ್ತೇನೆ. ಏರ್ ಇಂಡಿಯಾ ಸಂಸ್ಥೆಗಲ್ಲ ಎಂದು ಉದ್ಧಟತನ ಮೆರೆದಿದ್ದರು. ಅಲ್ಲದೆ, ಏರ್ ಇಂಡಿಯಾ ಸಿಬ್ಬಂದಿಯನ್ನ ಸಮರ್ಥಿಸಿಕೊಂಡಿದ್ದ ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ವಿರುದ್ಧವೂ ಶಿವಸೇನಾ ಸಂಸದರು ಮುಗಿಬಿದ್ದಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments