Select Your Language

Notifications

webdunia
webdunia
webdunia
webdunia

ವಿಧಾನಸಭೆ ವಿಸರ್ಜನೆ : ಸುಳಿವು ಕೊಟ್ಟ ರಾವತ್!

ವಿಧಾನಸಭೆ ವಿಸರ್ಜನೆ : ಸುಳಿವು ಕೊಟ್ಟ ರಾವತ್!
ಮುಂಬೈ , ಬುಧವಾರ, 22 ಜೂನ್ 2022 (14:09 IST)
ಮುಂಬೈ : ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಶಿವಸೇನೆ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡುವ ಮೂಲಕ ಹೊಸ ತಿರುವನ್ನು ಕೊಟ್ಟಿದ್ದಾರೆ.

ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿ ಸರ್ಕಾರಕ್ಕೆ ಸಂಕಟ ಬಂದಿದೆ. ಈ ಹಿನ್ನೆಲೆ ನಿನ್ನೆಯಿಂದ ಈ ಕುರಿತು ಭಾರೀ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಸಂಜಯ್ ರಾವತ್ ಟ್ವೀಟ್ ಮಾಡಿದ್ದು,

ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರ ರಾಜಕೀಯ ಬೆಳವಣೆಗೆಗಳ ಪಯಣ ಎಂದು ಒಂದೇ ಸಾಲಿನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಶಾಸಕಾಂಗ ಸಭೆಯನ್ನು ವಿಸರ್ಜನೆ ಸುಳಿವು ಕೊಟ್ಟಿದ್ದಾರೆ.

ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ಏಕನಾಥ್ ಶಿಂಧೆ ಅವರೊಂದಿಗಿರುವ ಮಾತುಕತೆ ನಡೆಸಲಾಗುತ್ತಿದೆ. ಎಲ್ಲರೂ ಶಿವಸೇನೆಯಲ್ಲಿಯೇ ಇರುತ್ತಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸುಪ್ರೀಂಗೆ ಕೇಂದ್ರದಿಂದ ಕೇವಿಯಟ್?