ಬಿಜೆಪಿ, ಮೋದಿ, ಆರೆಸ್ಸೆಸ್‌ನೊಂದಿಗೆ ಹೋರಾಡಲು ಸಿದ್ದ: ರಾಹುಲ್ ಗಾಂಧಿ

Webdunia
ಬುಧವಾರ, 13 ಡಿಸೆಂಬರ್ 2023 (08:56 IST)
ಭೂಸ್ವಾಧೀನ ಮಸೂದೆಗಾಗಿ ರೈತರಿಗಾಗಿ ಮಾಡಿದ ಹೋರಾಟದ ರೀತಿಯಲ್ಲಿ ಕೇಂದ್ರ ಸರಕಾರದ ವಿರುದ್ಧ ಹೋರಾಟ ಮಾಡಲಿದೆ ಎಂದು ಭರವಸೆ ನೀಡಿದರು. ಕಾರ್ಮಿಕರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ ಎಂದರು. ರೈತರ ಹಕ್ಕಿಗಾಗಿ ಹೋರಾಟ ಮಾಡಿದಂತೆ ಕಾರ್ಮಿಕರ ಹಿತಕ್ಕಾಗಿ ಬಿಜೆಪಿ, ಮೋದಿ ಮತ್ತು ಆರೆಸ್ಸೆಸ್‌ನೊಂದಿಗೆ ಹೋರಾಡಲು ಸಿದ್ದ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘೋಷಿಸಿದರು.
 
ಪ್ರಧಾನಿ ನರೇಂದ್ರ ಮೋದಿ ಉದ್ದೇಶಪೂರ್ವಕವಾಗಿ ಕಾರ್ಮಿಕ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವುದು ಕಾರ್ಮಿಕರಲ್ಲಿ ಅತೃಪ್ತಿ ಮೂಡಿಸಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
ಭಾರತ ದೇಶವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿಸಿ ನೆರೆಯ ರಾಷ್ಟ್ರವಾದ ಚೀನಾಗೆ ಹೆಚ್ಚಿನ ಪೋಪೋಟಿ ನೀಡಬೇಕು ಎನ್ನುವ ಪ್ರಧಾನಿ ಮೋದಿ ನಿಲುವು ಸ್ವಾಗತಾರ್ಹ. ಆದರೆ, ಯಾವುದೇ ಕಾರಣಕ್ಕೂ ಕಾರ್ಮಿಕರ ಕಾಯ್ದೆಗಳನ್ನು ದುರ್ಬಲಗೊಳಿಸಲು ಬಿಡುವುದಿಲ್ಲ ಎಂದರು.
 
ಪ್ರಧಾನಿ ಮೋದಿ ಬಾರತೀಯ ಕಾರ್ಮಿಕರನ್ನು ಅಪ್ರಾಮಾಣಿಕರು, ಸೋಮಾರಿಗಳು ಎಂದು ಭಾವಿಸುತ್ತಿರುವುದು ಸರಿಯಲ್ಲ. ದೇಶದ ಕಾರ್ಮಿಕರು ವಿಶ್ವಮಟ್ಟದಲ್ಲಿ ಬೆಳೆಯುವಂತಹ ಪ್ರತಿಭೆಯನ್ನು ಹೊಂದಿದ್ದಾರೆ ಎಂದು ಕೊಂಡಾಡಿದರು.
 
ಗುಜರಾತ್, ರಾಜಸ್ಥಾನ ಮತ್ತು ಹರಿಯಾಣಾ ರಾಜ್ಯಗಳಲ್ಲಿ ಜಾರಿಗೆ ತಂದ ಹೊಸ ಕಾರ್ಮಿಕ ಕಾಯ್ದೆಗಳನ್ನು ನೋಡಿದಲ್ಲಿ ಮೋದಿ ಕಾರ್ಮಿಕರನ್ನು ತುಳಿಯಲು ಪ್ರಯತ್ನಿಸುತ್ತಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ದುರ್ಬಲ ಕಾರ್ಮಿಕ ಕಾಯ್ದೆಗಳನ್ನು ತಂದು ಕಾರ್ಮಿಕರನ್ನು ತಮ್ಮ ಬೆರಳಿನಡಿ ಕುಣಿಸಲು ಪ್ರಧಾನಿ ಮೋದಿ ರಣತಂತ್ರ ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments