Webdunia - Bharat's app for daily news and videos

Install App

ಅಹ್ಮದಾಬಾದ್ ವಿಮಾನ ದುರಂತಕ್ಕೆ ಕಾರಣ ಬಯಲು: ಪೈಲೆಟ್ ಕೊನೆಯದಾಗಿ ಹೇಳಿದ್ದೇನು

Krishnaveni K
ಶನಿವಾರ, 12 ಜುಲೈ 2025 (11:06 IST)
ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿ 270 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದ ಏರ್ ಇಂಡಿಯಾ ವಿಮಾನ ಪತನಕ್ಕೆ ನಿಜ ಕಾರಣ ಈಗ ಬಯಲಾಗಿದೆ. ತನಿಖೆಯಲ್ಲಿ ಪೈಲೆಟ್ ಗಳ ನಡುವೆ ನಡೆದ ಕೊನೆಯ ಸಂಭಾಷಣೆ ಬಹಿರಂಗವಾಗಿದೆ.

ತನಿಖಾ ತಂಡದ 15 ಪುಟಗಳ ವರದಿ ಇದೀಗ ಬಹಿರಂಗಗೊಂಡಿದೆ. ಇದರಲ್ಲಿ ಕಾಕ್ ಪೀಟ್ ನಲ್ಲಿ ಪೈಲೆಟ್ ಗಳ ನಡುವೆ ನಡೆದ ಕೊನೆಯ ಸಂಭಾಷಣೆಯ ಧ್ವನಿ ಮುದ್ರಣದ ವಿವರವಿದೆ. ಈ ತನಿಖಾ ವರದಿಯಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯೆಲ್ ಇಂಜಿನ್ ವಿಫಲವಾಗಿರುವುದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ವಿಮಾನದ ತುದಿ 8 ಡಿಗ್ರಿ ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಆಗ ಇಂಧನ ಪೂರೈಕೆಯಾಗಲಿಲ್ಲ. ಇದೇ ಕಾರಣಕ್ಕೆ ಅಪಘಾತ ಸಂಭವಿಸಿತು ಎನ್ನಲಾಗಿದೆ. ಇಂಧನ ಪೂರೈಕೆ ಸ್ಥಗಿತಗೊಳ್ಳಲು ಪೈಲೆಟ್ ಗಳ ನಡುವೆ ನಡೆದ ಗೊಂದಲ ಕಾರಣ ಎನ್ನಲಾಗಿದೆ.

ಪೈಲೆಟ್ ಗಳ ಕೊನೆಯ ಸಂಭಾಷಣೆ ದಾಖಲಾಗಿದ್ದು, ಇದರಲ್ಲಿ ಒಬ್ಬ ಪೈಲೆಟ್ ನೀನ್ಯಾಕೆ ಇಂಧನ ಆಫ್ ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ. ಇನ್ನೊಬ್ಬ ಪೈಲೆಟ್ ಮಾಡಿಲ್ಲ ಎನ್ನುತ್ತಾರೆ. ಹೀಗಾಗಿ ಪೈಲೆಟ್ ಗಳ ಗೊಂದಲಗಳಿಂದಾಗಿಯೇ ಇಂಧನ ಪೂರೈಕೆ ಸ್ಥಗಿತವಾಗಿದೆ. ಇದರಿಂದಾಗಿಯೇ ಅಪಘಾತ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದ ಅಂಶಗಳಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments