ಅಹ್ಮದಾಬಾದ್ ವಿಮಾನ ದುರಂತಕ್ಕೆ ಕಾರಣ ಬಯಲು: ಪೈಲೆಟ್ ಕೊನೆಯದಾಗಿ ಹೇಳಿದ್ದೇನು

Krishnaveni K
ಶನಿವಾರ, 12 ಜುಲೈ 2025 (11:06 IST)
ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿ 270 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದ ಏರ್ ಇಂಡಿಯಾ ವಿಮಾನ ಪತನಕ್ಕೆ ನಿಜ ಕಾರಣ ಈಗ ಬಯಲಾಗಿದೆ. ತನಿಖೆಯಲ್ಲಿ ಪೈಲೆಟ್ ಗಳ ನಡುವೆ ನಡೆದ ಕೊನೆಯ ಸಂಭಾಷಣೆ ಬಹಿರಂಗವಾಗಿದೆ.

ತನಿಖಾ ತಂಡದ 15 ಪುಟಗಳ ವರದಿ ಇದೀಗ ಬಹಿರಂಗಗೊಂಡಿದೆ. ಇದರಲ್ಲಿ ಕಾಕ್ ಪೀಟ್ ನಲ್ಲಿ ಪೈಲೆಟ್ ಗಳ ನಡುವೆ ನಡೆದ ಕೊನೆಯ ಸಂಭಾಷಣೆಯ ಧ್ವನಿ ಮುದ್ರಣದ ವಿವರವಿದೆ. ಈ ತನಿಖಾ ವರದಿಯಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯೆಲ್ ಇಂಜಿನ್ ವಿಫಲವಾಗಿರುವುದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ವಿಮಾನದ ತುದಿ 8 ಡಿಗ್ರಿ ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಆಗ ಇಂಧನ ಪೂರೈಕೆಯಾಗಲಿಲ್ಲ. ಇದೇ ಕಾರಣಕ್ಕೆ ಅಪಘಾತ ಸಂಭವಿಸಿತು ಎನ್ನಲಾಗಿದೆ. ಇಂಧನ ಪೂರೈಕೆ ಸ್ಥಗಿತಗೊಳ್ಳಲು ಪೈಲೆಟ್ ಗಳ ನಡುವೆ ನಡೆದ ಗೊಂದಲ ಕಾರಣ ಎನ್ನಲಾಗಿದೆ.

ಪೈಲೆಟ್ ಗಳ ಕೊನೆಯ ಸಂಭಾಷಣೆ ದಾಖಲಾಗಿದ್ದು, ಇದರಲ್ಲಿ ಒಬ್ಬ ಪೈಲೆಟ್ ನೀನ್ಯಾಕೆ ಇಂಧನ ಆಫ್ ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ. ಇನ್ನೊಬ್ಬ ಪೈಲೆಟ್ ಮಾಡಿಲ್ಲ ಎನ್ನುತ್ತಾರೆ. ಹೀಗಾಗಿ ಪೈಲೆಟ್ ಗಳ ಗೊಂದಲಗಳಿಂದಾಗಿಯೇ ಇಂಧನ ಪೂರೈಕೆ ಸ್ಥಗಿತವಾಗಿದೆ. ಇದರಿಂದಾಗಿಯೇ ಅಪಘಾತ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದ ಅಂಶಗಳಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments