ಇಂಡಿಯಾ ಒಕ್ಕೂಟಕ್ಕೆ ನಿತೀಶ್ ಕುಮಾರ್ ಕೈ ಕೊಡಲು ನಿಜ ಕಾರಣ

Krishnaveni K
ಮಂಗಳವಾರ, 30 ಜನವರಿ 2024 (08:40 IST)
ಪಾಟ್ನಾ: ಜೆಡಿಯು ನಾಯಕ, ಬಿಹಾರ ಸಿಎಂ ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟದಿಂದ ಹೊರಬಂದು ಮತ್ತೆ ಎನ್ ಡಿಎ ಜೊತೆ ಕೈ ಜೋಡಿಸಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಬೆಂಬಲದೊಂದಿಗೆ ಮತ್ತೆ ಸರ್ಕಾರ ರಚಿಸಿದ್ದಾರೆ. ನಿತೀಶ್ ಕುಮಾರ್ ಗೆ  ಪಕ್ಷಾಂತರ ಮಾಡುವುದು ಹೊಸದೇನಲ್ಲ. ಆದರೆ ಈ ಬಾರಿ ವಿಪಕ್ಷಗಳ ಮೈತ್ರಿ ಕೂಟ ಇಂಡಿಯಾಗೆ ಕೈ ಕೊಡಲು ಕಾರಣವೇನೆಂದು ರಾಜಕೀಯ ವಿಶ್ಲೇಷಕರು ಕಂಡುಕೊಂಡಿದ್ದಾರೆ.

ಮೋದಿಗೆ ಸೆಡ್ಡು ಹೊಡೆದು ಪ್ರಧಾನಿ ಅಭ್ಯರ್ಥಿಯಾಗಿ ತಮ್ಮನ್ನು ಬಿಂಬಿಸಿಕೊಳ್ಳುವ ಧಾವಂತದಲ್ಲಿ ನಿತೀಶ್ ಇದ್ದರು. ಇದೇ ಕಾರಣಕ್ಕೆ ಇಂಡಿಯಾ ಒಕ್ಕೂಟದ ಜೊತೆ ಸೇರಿಕೊಂಡರು. ಆದರೆ ಇತ್ತೀಚೆಗೆ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಸಂಭಾವ್ಯರ ಪಟ್ಟಿಯಲ್ಲಿ ನಿತೀಶ್ ಹೆಸರು ಎಲ್ಲಿಯೂ ಕೇಳಿಬರಲಿಲ್ಲ.

ಹೀಗಾಗಿಯೇ ಅವರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಇದರ ಜೊತೆಗೆ ಬಿಹಾರದಲ್ಲಿ ಸೀಟು ಹಂಚಿಕೆ ವಿಚಾರ ಅವರ ಅಸಮಾಧಾನ ಹೆಚ್ಚಿಸಿತ್ತು. ಇಂಡಿಯಾ ಒಕ್ಕೂಟದಲ್ಲಿದ್ದರೆ ತಮ್ಮ ಪ್ರಧಾನಿ ಕನಸಂತೂ ನನಸಾಗಲ್ಲ ಎಂದು ಮನಗಂಡ ನಿತೀಶ್ ಹೊರಬಂದು ಮತ್ತೆ ಹಳೆಯ ದೋಸ್ತಿ ಎನ್ ಡಿಎ ಕೈ ಹಿಡಿದರು ಎಂದು ವಿಶ್ಲೇಷಿಸಲಾಗಿದೆ.

ಯಾವಾಗ ಮಮತಾ ಬ್ಯಾನರ್ಜಿ ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹೆಸರು ಸೂಚಿಸಿದರೋ ಅಂದಿನಿಂದ ಮೈತ್ರಿಕೂಟದಲ್ಲಿ ಬಿರುಕುಂಟಾಗಿದೆ. ಇದನ್ನೇ ಬಳಸಿಕೊಂಡು ಬಿಜೆಪಿ ಜೆಡಿಯುವನ್ನು ತನ್ನ ತೆಕ್ಕೆಗೆ ಸೆಳೆದುಕೊಂಡು ಇಂಡಿಯಾ ಒಕ್ಕೂಟ ಮುರಿಯುವಲ್ಲಿ ಬಹುತೇಕ ಯಶಸ್ವಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments