Webdunia - Bharat's app for daily news and videos

Install App

ಇಂಡಿಯಾ ಒಕ್ಕೂಟಕ್ಕೆ ನಿತೀಶ್ ಕುಮಾರ್ ಕೈ ಕೊಡಲು ನಿಜ ಕಾರಣ

Krishnaveni K
ಮಂಗಳವಾರ, 30 ಜನವರಿ 2024 (08:40 IST)
ಪಾಟ್ನಾ: ಜೆಡಿಯು ನಾಯಕ, ಬಿಹಾರ ಸಿಎಂ ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟದಿಂದ ಹೊರಬಂದು ಮತ್ತೆ ಎನ್ ಡಿಎ ಜೊತೆ ಕೈ ಜೋಡಿಸಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಬೆಂಬಲದೊಂದಿಗೆ ಮತ್ತೆ ಸರ್ಕಾರ ರಚಿಸಿದ್ದಾರೆ. ನಿತೀಶ್ ಕುಮಾರ್ ಗೆ  ಪಕ್ಷಾಂತರ ಮಾಡುವುದು ಹೊಸದೇನಲ್ಲ. ಆದರೆ ಈ ಬಾರಿ ವಿಪಕ್ಷಗಳ ಮೈತ್ರಿ ಕೂಟ ಇಂಡಿಯಾಗೆ ಕೈ ಕೊಡಲು ಕಾರಣವೇನೆಂದು ರಾಜಕೀಯ ವಿಶ್ಲೇಷಕರು ಕಂಡುಕೊಂಡಿದ್ದಾರೆ.

ಮೋದಿಗೆ ಸೆಡ್ಡು ಹೊಡೆದು ಪ್ರಧಾನಿ ಅಭ್ಯರ್ಥಿಯಾಗಿ ತಮ್ಮನ್ನು ಬಿಂಬಿಸಿಕೊಳ್ಳುವ ಧಾವಂತದಲ್ಲಿ ನಿತೀಶ್ ಇದ್ದರು. ಇದೇ ಕಾರಣಕ್ಕೆ ಇಂಡಿಯಾ ಒಕ್ಕೂಟದ ಜೊತೆ ಸೇರಿಕೊಂಡರು. ಆದರೆ ಇತ್ತೀಚೆಗೆ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಸಂಭಾವ್ಯರ ಪಟ್ಟಿಯಲ್ಲಿ ನಿತೀಶ್ ಹೆಸರು ಎಲ್ಲಿಯೂ ಕೇಳಿಬರಲಿಲ್ಲ.

ಹೀಗಾಗಿಯೇ ಅವರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಇದರ ಜೊತೆಗೆ ಬಿಹಾರದಲ್ಲಿ ಸೀಟು ಹಂಚಿಕೆ ವಿಚಾರ ಅವರ ಅಸಮಾಧಾನ ಹೆಚ್ಚಿಸಿತ್ತು. ಇಂಡಿಯಾ ಒಕ್ಕೂಟದಲ್ಲಿದ್ದರೆ ತಮ್ಮ ಪ್ರಧಾನಿ ಕನಸಂತೂ ನನಸಾಗಲ್ಲ ಎಂದು ಮನಗಂಡ ನಿತೀಶ್ ಹೊರಬಂದು ಮತ್ತೆ ಹಳೆಯ ದೋಸ್ತಿ ಎನ್ ಡಿಎ ಕೈ ಹಿಡಿದರು ಎಂದು ವಿಶ್ಲೇಷಿಸಲಾಗಿದೆ.

ಯಾವಾಗ ಮಮತಾ ಬ್ಯಾನರ್ಜಿ ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹೆಸರು ಸೂಚಿಸಿದರೋ ಅಂದಿನಿಂದ ಮೈತ್ರಿಕೂಟದಲ್ಲಿ ಬಿರುಕುಂಟಾಗಿದೆ. ಇದನ್ನೇ ಬಳಸಿಕೊಂಡು ಬಿಜೆಪಿ ಜೆಡಿಯುವನ್ನು ತನ್ನ ತೆಕ್ಕೆಗೆ ಸೆಳೆದುಕೊಂಡು ಇಂಡಿಯಾ ಒಕ್ಕೂಟ ಮುರಿಯುವಲ್ಲಿ ಬಹುತೇಕ ಯಶಸ್ವಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments