Webdunia - Bharat's app for daily news and videos

Install App

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಇದುವೇ ಕಾರಣ

Krishnaveni K
ಭಾನುವಾರ, 9 ಫೆಬ್ರವರಿ 2025 (08:58 IST)
Photo Credit: X
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಬಿಜೆಪಿ ಅಭೂತಪೂರ್ವ ಗೆಲುವಿಗೆ ಕಾರಣವೇನು ಎಂದು ನೋಡಿದರೆ ಎರಡು ಕಾರಣಗಳು ಪ್ರಮುಖವಾಗಿ ಕಂಡುಬರುತ್ತಿದೆ.

ದೆಹಲಿ ಗದ್ದುಗೆಗೇರುತ್ತಿರುವ ಬಿಜೆಪಿಗೆ ಮೊದಲನೆಯದಾಗಿ ಪ್ಲಸ್ ಪಾಯಿಂಟ್ ಆಗಿದ್ದು ಕೇಜ್ರಿವಾಲ್ ಮೇಲಿನ ಭ್ರಷ್ಟಾಚಾರ ಆರೋಪಗಳು. ದೆಹಲಿ ಮದ್ಯ ನೀತಿ ಅಕ್ರಮದಲ್ಲಿ ಜೈಲು ಸೇರಿದ್ದ ಕೇಜ್ರಿವಾಲ್ ಮೇಲೆ ಜನರಿಗೆ ಅಪನಂಬಿಕೆ ಶುರುವಾಗಿತ್ತು. ಸರಳ, ಸ್ವಚ್ಛ ಆಡಳಿತದ ಧ್ಯೇಯ ವಾಕ್ಯವನ್ನಿಟ್ಟುಕೊಂಡು ಅಧಿಕಾರಕ್ಕೇರಿದ್ದ ಆಪ್ ಕೂಡಾ ಇತರೆ ಪಕ್ಷಗಳಂತೆಯೇ ಎಂದು ಬಿಂಬಿಸುವಲ್ಲಿ ಬಿಜೆಪಿ ಯಶಸ್ವಿಯಾಯಿತು.

ಕೇಜ್ರಿವಾಲ್ ಗೆ ಖಲಿಸ್ತಾನಿಗಳ ಜೊತೆಗಿನ ನಂಟು, ಐಷಾರಾಮಿ ಬಂಗಲೆ ಆರೋಪಗಳು ಅವರ ಮೇಲೆ ಜನರಿಗೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿತ್ತು. ಅಲ್ಲದೆ ತಾವು ಭ್ರಷ್ಟಾಚಾರದ ಆರೋಪದಲ್ಲಿ ಜೈಲಿಗೆ ಹೋಗಿದ್ದರೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡದ ಅವರ ಮೇಲೆ ಜನರಿಗೆ ಆಕ್ರೋಶವಿತ್ತು.

ಇನ್ನೊಂದು ಪ್ರಮುಖ ಕಾರಣವೆಂದರೆ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಕೇಜ್ರಿ ಕಾಂಗ್ರೆಸ್ ಜೊತೆಗಿನ ಮೈತ್ರಿ ಕಡಿದುಕೊಂಡಿದ್ದು, ಇದು ಎರಡೂ ಪಕ್ಷಕ್ಕೂ ಹೊಡೆತ ನೀಡಿತ್ತು. ಇದರ ಲಾಭ ಮಾಡಿಕೊಂಡಿದ್ದು ಬಿಜೆಪಿ. ಒಂದು ರೀತಿಯಲ್ಲಿ ಹೇಳುವುದಾದರೆ ತನಗೆ ಯಾರ ಸಹಾಯವೂ ಬೇಡ, ಏಕಾಂಗಿಯಾಗಿ ಬಿಜೆಪಿ ಸೋಲಿಸಬಲ್ಲೆವು ಎಂಬ ಕೇಜ್ರಿವಾಲ್ ಅತಿಯಾದ ಆತ್ಮವಿಶ್ವಾಸವೇ ಇಲ್ಲಿ ಅವರಿಗೆ ಮುಳುವಾಯಿತು ಎನ್ನಬಹುದು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments