Webdunia - Bharat's app for daily news and videos

Install App

ಕೊನೆಗೂ ಬಯಲಾಯ್ತು ಏರ್ ಕಮಾಂಡರ್ ಹತ್ಯೆ ರಹಸ್ಯ

Webdunia
ಗುರುವಾರ, 23 ಫೆಬ್ರವರಿ 2017 (13:30 IST)
ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ನಿವೃತ್ತ ಏರ್ ಕಮಾಂಡರ್ ಪರ್ವೇಜ್ ಕೋಕರ್ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದ್ದು ಅವರಲ್ಲಿ ಐವರು ಕೊಲೆ ಕೃತ್ಯದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗುತ್ತಿದೆ. 
 
ಈ ಕುರಿತು ಕೇಂದ್ರ ವಲಯದ ಐಜಿಪಿ ಸೀಮಂತ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
 
23.11.2011 ರ ಮಧ್ಯರಾತ್ರಿ ಹೆಬ್ಬುಗೋಡಿಯಲ್ಲಿರುವ ಸ್ಮೈಲಿ ಗ್ರೀನ್ ಪ್ಲಾಂಟೇಷನ್‌ನಲ್ಲಿ ಕಮಾಂಡರ್ ಪರ್ವೇಜ್ ಹತ್ಯೆಯಾಗಿತ್ತು. ಅವರನ್ನು ಉಸಿರುಗಟ್ಟಿಸಿ ಕೊಲೆಗೈಯ್ಯಲಾಗಿತ್ತು. ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಇದು ಕಳ್ಳರ ಕೃತ್ಯ ಎಂಬುದು ಖಚಿತವಾಗಿತ್ತು. ದೇಶಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಆರೋಪಿಗಳ ಪತ್ತೆ ಸವಾಲಾಗಿ ಪರಿಣಮಿಸಿತ್ತು. ಮತ್ತೀಗ ಘಟನೆ ನಡೆದ ಬರೊಬ್ಬರಿ 5 ವರ್ಷಗಳ ಬಳಿಕ ಪೊಲೀಸರು ತಮ್ಮ ಕಾರ್ಯದಲ್ಲಿ ಯಶ ಕಂಡಿದ್ದಾರೆ.
 
ಮುಖ್ಯ ಆರೋಪಿಗಳನ್ನು ಶ್ರೀನಿವಾಸ , ಗಿರೀಶ್, ಸುಬ್ರಮಣಿ, ನಾಗರಾಜು, ಸತ್ಯನಾರಾಯಣ ಎಂದು ಗುರುತಿಸಲಾಗಿದ್ದು ಇವರೆಲ್ಲ ಕೊಲೆ ಕೃತ್ಯದಲ್ಲಿ ಪಾಲ್ಗೊಂಡವರಾಗಿದ್ದಾರೆ. ಅವರ ಗ್ಯಾಂಗ್‌ನ ಇತರ 7 ಮಂದಿಯನ್ನು ಸಹ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಂಧನದಿಂದ ಪೊಲೀಸರು ಇತರ 20 ಪ್ರಕರಣಗಳನ್ನು ಸಹ ಭೇದಿಸಿದಂತಾಗಿದೆ. 
 
ಬಂಧಿತರಿಂದ 1.25ಕೋಟಿ ಮೌಲ್ಯದ ವಜ್ರ ಮತ್ತು ಚಿನ್ನಾಭರಣ, ರಿವಾಲ್ವರ್, ಗುಂಡು,  60ಕೋಟಿ ಮೌಲ್ಯದ ಭೂಮಿ ಹಕ್ಕುಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ,

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments