Webdunia - Bharat's app for daily news and videos

Install App

ವಿಶ್ವಸಂಸ್ಥೆ ಸೇರಿ ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆ ಅಗತ್ಯ: ಸೀತಾರಾಮನ್

Webdunia
ಬುಧವಾರ, 13 ಅಕ್ಟೋಬರ್ 2021 (13:54 IST)
ನವದೆಹಲಿ : 'ವಿಶ್ವಸಂಸ್ಥೆ, ವಿಶ್ವ ಬ್ಯಾಂಕ್ ಹಾಗೂ ಅಂತರರಾಷ್ಟ್ರೀಯ ಹಣಕಾಸು ನಿಧಿಯಂತಹ (ಐಎಂಎಫ್) ಸಂಸ್ಥೆಗಳಲ್ಲಿ ತುರ್ತಾಗಿ ಸುಧಾರಣೆಗಳನ್ನು ತರುವುದು ಅಗತ್ಯ' ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದರು.

ಹಾರ್ವರ್ಡ್ ಕೆನಡಿ ಸ್ಕೂಲ್ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
'ಹಲವು ದೇಶಗಳು ವ್ಯಾಪಾರ, ಭದ್ರತೆ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಒದಗಿಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಈ ಜಾಗತಿಕ ಸಂಸ್ಥೆಗಳ ಮೊರೆ ಹೋಗಿವೆ. ಆದರೆ, ಈ ದೇಶಗಳ ಅಹವಾಲುಗಳಿಗೆ ಈ ವರೆಗೆ ಸ್ಪಂದನೆ ಸಿಕ್ಕಿಲ್ಲ' ಎಂದು ಹೇಳಿದರು.
'ಎಲ್ಲ ರಾಷ್ಟ್ರಗಳು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುತ್ತಿರುವಾಗ ಈ ಜಾಗತಿಕ ಸಂಸ್ಥೆಗಳ ಕಾರ್ಯವೈಖರಿ ಮಾತ್ರ ಹಲವಾರು ದಶಕಗಳಿಂದ ಸುಧಾರಣೆಯಾಗಿಲ್ಲ' ಎಂದು ಹೇಳಿದರು. 'ಎರಡಂಕಿ ಪ್ರಗತಿ ವಿಶ್ವಾಸ': 'ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಪ್ರಗತಿ ದರ ಎರಡಂಕಿ ಸಮೀಪಿಸುವ ವಿಶ್ವಾಸ ಇದೆ' ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments