Webdunia - Bharat's app for daily news and videos

Install App

ಶೌಚಾಲಯ ನಿರ್ಮಿಸಲಿಲ್ಲವೆಂದು ಆತ್ಮಹತ್ಯೆ

Webdunia
ಶನಿವಾರ, 4 ಜುಲೈ 2015 (11:04 IST)
ಮನೆಯಲ್ಲಿಯೇ ಶೌಚಾಲಯ ನಿರ್ಮಿಸಿ ಕೊಡಲು ತಂದೆ-ತಾಯಿ ಒಪ್ಪದ ಕಾರಣ ನೊಂದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.  

ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ 17 ವರ್ಷದ ಯುವತಿ ಖುಷ್ಬು ಕುಮಾರಿ ಬಯಲು ಶೌಚಾಲಯಕ್ಕೆ ಹೋಗಲು ಮುಜುಗರ ಪಟ್ಟುಕೊಳ್ಳುತ್ತಿದ್ದಳು. ಈ ಕಾರಣಕ್ಕೆ ಮನೆಯ ಬಳಿಯೇ ಶೌಚಾಲಯ ನಿರ್ಮಿಸಿ ಕೊಡುವಂತೆ ತಂದೆ -ತಾಯಿ ಬಳಿ ಹಲವು ಬಾರಿ ಕೇಳಿಕೊಂಡಿದ್ದಳು. ಆದರೆ ಆಕೆಯ ಮದುವೆಗಾಗಿ ಹಣವನ್ನು ಉಳಿಸುವ ಉದ್ದೇಶದಿಂದ ಶೌಚಾಲಯ ನಿರ್ಮಾಣ ಮಾಡಿಕೊಡಲು  ಆಕೆಯ ತಂದೆ ಒಪ್ಪಲಿಲ್ಲ. 
 
"ಅವರದು ನಾಲ್ಕು ಕೋಣೆಯುಳ್ಳ ಮನೆ. ಆದರೆ ಬಡವರಾಗಿದ್ದ ಅವರು ಮಗಳ ಮದುವೆ ಖರ್ಚಿಗೆ ಹಣವನ್ನು ಹೊಂದಿಸುವುದಕ್ಕೆ ಪ್ರಥಮ ಆದ್ಯತೆ ನೀಡಿದ್ದರಿಂದ ಶೌಚಾಲಯದ ಬೇಡಿಕೆಯನ್ನು ನಿರ್ಲಕ್ಷಿಸಿದ್ದರು. ತನ್ನ ತಂದೆ- ತಾಯಿ ಶೌಚಾಲಯ ನಿರ್ಮಿಸಿ ಕೊಟ್ಟಿಲ್ಲವೆಂದು ಬಹುವಾಗಿ ನೊಂದಿದ್ದ ಖುಷ್ಬೂ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಫ್ಯಾನ್ ಒಂದಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ", ಎಂದು ಪೊಲೀಸ್ ಅಧೀಕ್ಷಕರಾದ ವಿಪುಲ್  ಶುಕ್ಲಾ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ