Select Your Language

Notifications

webdunia
webdunia
webdunia
webdunia

ಕಾವೇರಿ ನೀರು ಬಿಡಿ ಇಲ್ಲಾಂದ್ರೆ ಅಷ್ಟೆ: ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳುಸೈ ಸೌಂದರ್ಯ ರಾಜನ್

ಕಾವೇರಿ ನೀರು ಬಿಡಿ ಇಲ್ಲಾಂದ್ರೆ ಅಷ್ಟೆ: ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳುಸೈ ಸೌಂದರ್ಯ ರಾಜನ್
ಬೆಂಗಳೂರು , ಬುಧವಾರ, 28 ಸೆಪ್ಟಂಬರ್ 2016 (13:42 IST)
ಕರ್ನಾಟಕದಲ್ಲಿ ಬಿಜೆಪಿ ಮುಖಂಡರು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದು ಬೇಡ ಎಂದು ಒತ್ತಾಯಿಸುತ್ತಿದ್ದರೆ, ತಮಿಳುನಾಡಿನಲ್ಲಿ ಬಿಜೆಪಿ ಘಟಕದ ರಾಜ್ಯಾಧ್ಯಕ್ಷೆ ತಮಿಳುಸೈ ಸೌಂದರ್ಯ ರಾಜನ್ ನೀರು ಹರಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸೌಂದರ್ಯ ರಾಜನ್, ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಿ ತಮಿಳುನಾಡಿಗೆ ನೀರು ಹರಿಸಿ ಇಲ್ಲವಾದರೆ ನ್ಯಾಯಾಂಗ ನಿಂದನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
 
ತಮಿಳುನಾಡಿನಲ್ಲಿ ಸಾಂಬಾ ಬೆಳೆ ಬೆಳೆಯುವ ರೈತರು ನೀರಿನ ಕೊರತೆ ಎದುರಿಸುತ್ತಿದ್ದಾರೆ. ಕರ್ನಾಟಕ ಕೂಡಲೇ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
 
ಪ್ರಜಾಪ್ರಭುತ್ವದಲ್ಲಿ ಮತ್ತು ಒಕ್ಕೂಟದ ವ್ಯವಸ್ಥೆಯಲ್ಲಿ ಸುಪ್ರೀಂಕೋರ್ಟ್ ಆದೇಶವೇ ಅಂತಿಮ, ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷೆ ತಮಿಳುಸೈ ಸೌಂದರ್ಯ ರಾಜನ್  ಸಲಹೆ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಮೇಯರ್ ಆಗಿ ಜಿ.ಪದ್ಮಾವತಿ ಆಯ್ಕೆ