ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಧೂರ್ತ ವ್ಯಕ್ತಿಯೊಬ್ಬ 10 ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ಘಟನೆ ಹೈದರಾಬಾದ್ನ ಬೊಲ್ಲರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವರದಿಗಳ ಪ್ರಕಾರ ಆರೋಪಿಯನ್ನು ಅನಿಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಶನಿವಾರವಷ್ಟೇ ಆತ ಜೈಲಿನಿಂದ ಬಿಡುಗಡೆಯಾಗಿದ್ದು ಮತ್ತೆ ಘೋರ ಅಪರಾಧವೆಸಗಿದ್ದಾನೆ.
ಈ ಹೇಯ ಕೃತ್ಯದ ಬಳಿಕ ಆತ ಆಕೆಯ ತಲೆಯನ್ನು ಕಟ್ಟಡಕ್ಕೆ ಜಜ್ಜಿ ಹತ್ಯೆಗೈದಿದ್ದಾನೆ.
ಬಾಲಕಿ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು. ಭಾನುವಾರ ಬೆಳಿಗ್ಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗುವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಾಪತ್ತೆಯಾಗಿರುವ ಆರೋಪಿಯ ಪತ್ತೆಗಾಗಿ ತಂಡ ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.