Webdunia - Bharat's app for daily news and videos

Install App

ಧರ್ಮ ದೇಶದ ಮೂಲತಳಹದಿ, ನಿರ್ಲಕ್ಷಿಸುವಂತಿಲ್ಲ: ಮೋಹನ್ ಭಾಗವತ್

Webdunia
ಭಾನುವಾರ, 9 ಅಕ್ಟೋಬರ್ 2016 (12:48 IST)
ಧರ್ಮ ದೇಶದ ಮೂಲತಳಹದಿಯಾಗಿದ್ದರಿಂದ ಅದನ್ನು ನಿರ್ಲಕ್ಷಿಸುವಂತಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
 
ಜನ ಸಂಘ ಸಂಸ್ಥಾಪಕ ದೀನ್ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾಗವತ್, ದೇಶದ ಮೂಲವನ್ನು ಮರೆಯುವಂತಿಲ್ಲ. ದೇಶದ ಮೂಲವೇ ಧರ್ಮವಾಗಿದೆ ಎಂದು ತಿಳಿಸಿದ್ದಾರೆ. 
 
ದೇಶವನ್ನು ನಾವು ಕುಟುಂಬ ಎಂದು ಕರೆಯುತ್ತೇವೆ. ಕೌಟಂಬಿಕ ಧರ್ಮವನ್ನು ಪಾಲಿಸಬೇಕಾಗಿದೆ. ಭಾರತದ ಸಿದ್ದಾಂತ, ಸಂಸ್ಕ್ರತಿ ದೇಶದ ಮಹತ್ವದ ಸಾರವನ್ನು ಸಾರುತ್ತವೆ ಎಂದು ಅಭಿಪ್ರಾಯಪಟ್ಟರು. 
 
ಸಾವಿರಾರು ವರ್ಷಗಳ ಹಿಂದೆಯೇ ಭಾರತ ವಿಶ್ವದ ಪ್ರಮುಖ ದೇಶಗಳಲ್ಲಿ ಒಂದಾಗಿತ್ತು. ಆದರೆ, ತದನಂತರ ಬಂದ ವಿದೇಶಿ ಅಡಳಿತಗಾರರಿಂದ ಜನಪ್ರಿಯತೆ ಕುಸಿಯತೊಡಗಿತು. ರೈತರು ರಸಾಯನಿಕ ಗೊಬ್ಬರವನ್ನು ಬಳಸುವ ಬದಲಿಗೆ ಸಾವಯುವ ಗೊಬ್ಬರವನ್ನು ಬಳಸುವಂತೆ ಅಂದೇ ಎಚ್ಚರಿಕೆ ನೀಡಿದ್ದರು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments