Webdunia - Bharat's app for daily news and videos

Install App

ಕೊಹಿನೂರ್ ವಜ್ರ ಬ್ರಿಟನ್ನಿಂದ ವಾಪಸ್ ತರಿಸಿ ಎಂದು ರಾಷ್ಟ್ರಪತಿಗೆ ಮನವಿ

Webdunia
ಮಂಗಳವಾರ, 13 ಸೆಪ್ಟಂಬರ್ 2022 (15:35 IST)
ಭುವನೇಶ್ವರ : ಕೊಹಿನೂರ್ ವಜ್ರವು ಜಗನ್ನಾಥ ದೇವರಿಗೆ ಸೇರಿದ್ದು, ಬ್ರಿಟನ್ನಿಂದ ಅದನ್ನು ಐತಿಹಾಸಿಕ ಪುರಿ ಜಗನ್ನಾಥ ದೇವಾಲಯಕ್ಕೆ  ವಾಪಸ್ ತರಲು,

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಧ್ಯಸ್ಥಿಕೆಯಲ್ಲಿ ಕ್ರಮವಹಿಸಬೇಕು ಎಂದು ಒಡಿಶಾದ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆ ಮನವಿ ಮಾಡಿದೆ.

ರಾಣಿ ಎಲಿಜಬೆತ್-2 ನಿಧನ ನಂತರ, ಆಕೆಯ ಹಿರಿಯ ಪುತ್ರ ಪ್ರಿನ್ಸ್ ಚಾರ್ಲ್ಸ್  ಬ್ರಿಟನ್ ರಾಜನಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನಿಯಮಗಳ ಪ್ರಕಾರ, 105 ಕ್ಯಾರೆಟ್ ವಜ್ರವಿರುವ ಕಿರೀಟವನ್ನು ಚಾರ್ಲ್ಸ್ ಪತ್ನಿ ಕಾರ್ನ್ವಾಲ್ ಕ್ಯಾಮಿಲ್ಲಾ ಅವರು ಧರಿಸಲಿದ್ದಾರೆ. 

12ನೇ ಶತಮಾನದ ದೇಗುಲಕ್ಕೆ ಕೊಹಿನೂರ್ ವಜ್ರವನ್ನು ಮರಳಿ ತರುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪುರಿ ಮೂಲದ ಶ್ರೀ ಜಗನ್ನಾಥ ಸೇನೆಯು ರಾಷ್ಟ್ರಪತಿಗಳಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿತು.

ಕೊಹಿನೂರ್ ವಜ್ರವು ಶ್ರೀ ಜಗನ್ನಾಥ ಭಾಗ್ಬನ್ ಅವರದ್ದು. ಅದು ಈಗ ಇಂಗ್ಲೆಂಡ್ ರಾಣಿ ಬಳಿ ಇದೆ. ಮಹಾರಾಜ ರಂಜಿತ್ ಸಿಂಗ್ ಅವರು ತಮ್ಮ ಇಚ್ಛೆಯ ಮೇರೆಗೆ ಅದನ್ನು ಜಗನ್ನಾಥ ದೇವರಿಗೆ ದಾನ ಮಾಡಿದಂತೆ, ಅದನ್ನು ಭಾರತಕ್ಕೆ ತರಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿಯವರಲ್ಲೂ ವಿನಂತಿಸುತ್ತೇವೆ ಎಂದು ಕೋರಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments