Webdunia - Bharat's app for daily news and videos

Install App

ಜಾತಿ ಆಧಾರಿತ ಅಲ್ಲ ಆರ್ಥಿಕತೆ ಆಧಾರದಲ್ಲಿ ಮೀಸಲಾತಿ ಬೇಕು ಎಂದ ದೇವೇಗೌಡರು: ನೀವೇನಂತೀರಿ

Krishnaveni K
ಬುಧವಾರ, 18 ಡಿಸೆಂಬರ್ 2024 (10:11 IST)
ನವದೆಹಲಿ: ಒಂದೊಂದು ಪಂಗಡದವರು ತಮಗೆ ಮೀಸಲಾತಿ ಬೇಕು ಎಂದು ಹೋರಾಟ ನಡೆಸುತ್ತಿದ್ದರೆ ಇತ್ತ ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ. ಜಾತಿ ಆಧಾರಿತ ಅಲ್ಲ ಆರ್ಥಿಕತೆ ಆಧಾರಿತ ಮೀಸಲಾತಿ ಬರಲಿ ಎಂದಿದ್ದಾರೆ.

ರಾಜ್ಯಸಭೆಯಲ್ಲಿ ಸಂವಿಧಾನ ಕುರಿತಾದ ಚರ್ಚೆ ಸಂದರ್ಭದಲ್ಲಿ ಅವರು ಇಂತಹದ್ದೊಂದು ಹೊಸ ವಿಚಾರವನ್ನು ಮುಂದಿಟ್ಟಿದ್ದಾರೆ. ದೇಶದಲ್ಲಿ ಜಾತಿ ಆಧಾರದಲ್ಲಿ ಮೀಸಲಾತಿ ನೀಡುವುದನ್ನು ಮುಂದುವರಿಸಬೇಕೇ ಅಥವಾ ಆರ್ಥಿಕ ಸ್ಥಿತಗತಿಗೆ ಅನುಗುಣವಾಗಿ ಮೀಸಲಾತಿ ನೀಡಬೇಕೇ ಎನ್ನುವ ಬಗ್ಗೆ ಚರ್ಚೆಯಾಗಲಿ ಎಂದಿದ್ದಾರೆ.

ಕಳೆದ 75 ವರ್ಷಗಳಿಂದ ದೇಶದಲ್ಲಿ ಮೀಸಲಾತಿ ಸೇರಿದಂತೆ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುವವರಿದ್ದಾರೆ. ಮೀಸಲಾತಿಯ ಹೊರತಾದ ಜನರೂ ಎರಡು ಹೊತ್ತಿನ ಊಟಕ್ಕೆ ಪರದಾಡುವ ಸ್ಥಿತಿಯಿದೆ. ಮೀಸಲು ನೀಡಿದ್ದರೂ ಅವರ ಜೀವನ ಏಕೆ ಸುಧಾರಿಸಿಲ್ಲ? ಈ ನಿಟ್ಟಿನಲ್ಲಿ ನಾವು ಚಿಂತನೆ ಮಾಡಬೇಕಿದೆ ಎಂದು ದೇವೇಗೌಡರು ಹೇಳಿದ್ದಾರೆ.

ಮೀಸಲಾತಿ ಬಗ್ಗೆ ಮುಂದಿನ ದಿನಗಳಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿದ್ದರೂ ಹಿಂದೆ ಯಾವ ಪರಿಸ್ಥಿತಿಯಲ್ಲಿ ಮೀಸಲಾತಿ ನೀಡಲಾಗಿತ್ತು, ಈಗ ಯಾವ ಪರಿಸ್ಥಿತಿಯಿದೆ ಯಾರು ಕಡುಬಡತನದಲ್ಲಿದ್ದಾರೋ ಅವರನ್ನು ಮಾತ್ರ ಪರಿಗಣಿಸಬೇಕೇ ಎಂಬಿತ್ಯಾದಿ ಅಂಶಗಳನ್ನು ಪರಿಗಣಿಸಿ ಮೀಸಲಾತಿ ನೀಡುವಂತಾಗಬೇಕು ಎಂದು ದೇವೇಗೌಡರು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments