Webdunia - Bharat's app for daily news and videos

Install App

ಗೆಹ್ಲೋಟ್ ಬಣದ ಶಾಸಕರಿಂದ ರಾಜೀನಾಮೆ ಎಚ್ಚರಿಕೆ?

Webdunia
ಸೋಮವಾರ, 26 ಸೆಪ್ಟಂಬರ್ 2022 (12:05 IST)
ಜೈಪುರ : ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ನ ಅಧ್ಯಕ್ಷೀಯ ಚುನಾವಣೆಗೆ ನಿಲ್ಲುವುದಾಗಿ ತಿಳಿಸಿರುವುದರೊಂದಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆಯೂ ಸುಳಿವು ನೀಡಿದ್ದಾರೆ.

ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪಕ್ಷದಲ್ಲಿ ಭಾರೀ ಬಿಕ್ಕಟ್ಟು ಉಂಟಾಗಿದ್ದು, ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೈಡ್ರಾಮಾ ಪ್ರಾರಂಭಿಸಿದ್ದಾರೆ.

ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥರಾಗಿ ಆಯ್ಕೆಯಾದರೆ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಸ್ಥಾನವನ್ನು ಹೊಸ ತಲೆಮಾರಿನವರಿಗೆ ಕೊಡಬೇಕೆಂದು ಹೇಳಿದ್ದರು. ಈ ಕಾರಣಕ್ಕೆ ಸಚಿನ್ ಪೈಲಟ್ ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆ ಇತ್ತು.

ಸಚಿನ್ ಪೈಲಟ್ ಅವರಿಗೆ ಸಿಎಂ ಸ್ಥಾನ ನೀಡುವುದನ್ನು ಧಿಕ್ಕರಿಸಿ ಇದೀಗ ಗೆಹ್ಲೋಟ್ ಬಣದ ಶಾಸಕರು ಹೈಡ್ರಾಮಾ ನಡೆಸಿದ್ದಾರೆ.

ಸಚಿನ್ ಪೈಲಟ್ ಅವರಿಗೆ ಸಿಎಂ ಸ್ಥಾನವನ್ನು ನೀಡುವ ಬದಲು ನಮ್ಮಲ್ಲಿಯೇ ಯಾರಾದರೂ ಅನುಭವಿ ರಾಜಕಾರಣಿಗಳಿಗೆ ಸಿಎಂ ಸ್ಥಾನ ನೀಡಿ ಎಂದು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಇದಾಗದೇ ಹೋದಲ್ಲಿ ಹಲವು ಶಾಸಕರು ಕಾಂಗ್ರೆಸ್ ತೊರೆಯುವುದಾಗಿಯೂ ಹೈಕಮಾಂಡ್ಗೆ ಎಚ್ಚರಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments