Webdunia - Bharat's app for daily news and videos

Install App

ತಿರುಪತಿ ಲಡ್ಡು ಪ್ರಸಾದದ ಪಾವಿತ್ರ್ಯತೆ ಪುನರ್‌ಸ್ಥಾಪನೆ, ಆತಂಕ ಬೇಡ: ಟಿಟಿಡಿ ಸ್ಪಷ್ಟನೆ

Sampriya
ಶನಿವಾರ, 21 ಸೆಪ್ಟಂಬರ್ 2024 (14:14 IST)
Photo Courtesy X
ಬೆಂಗಳೂರು: ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸಲಾಗಿದೆ. ಈಗ ಸಿಗುತ್ತಿರುವ ಪ್ರಸಾದದ ಬಗ್ಗೆ ಆತಂಕಪಡಬೇಕಿಲ್ಲ, ಅದು ಕಳಂಕರಹಿತವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನದ ಸಮಿತಿ ಹೇಳಿದೆ.

ಈ ಕುರಿತು ಟಿಟಿಡಿ ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿದೆ. ಲಡ್ಡುವಿನ ದೈವತ್ವ ಹಾಗೂ ಪಾವಿತ್ರ್ಯತೆ ಇದೀಗ ಕಳಂಕರಹಿತವಾಗಿದೆ. ಭಕ್ತರಿಗೆ ಸಾಕಾಗುವಷ್ಟು ಹಾಗೂ ಪಾವಿತ್ರ್ಯತೆ ಇರುವ ಪ್ರಸಾದವನ್ನು ಒದಗಿಸುವಲ್ಲಿ ಟಿಟಿಡಿ ಬದ್ಧವಾಗಿದೆ ಎಂದು ಹೇಳಿದೆ.

ತಿರುಪತಿಯ ಪ್ರಸಾದ ಲಾಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ಈ ಬಗ್ಗೆ ವ್ಯಾಪಕ ವಿವಾದವಾಗಿದೆ. ದೇವಸ್ಥಾನದ ಪಾವಿತ್ರ್ಯ, ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂಬ ಆರೋಪ ವಿವಿಧೆಡೆ ಕೇಳಿಬಂದಿದೆ.

ಚಂದ್ರಬಾಬು ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ ದೇವರನ್ನೂ ಬಳಸಿಕೊಳ್ಳುವ ಮಟ್ಟಕ್ಕೆ ಇಳಿದಿದ್ದಾರೆ. ಆ ಮೂಲಕ ಅವರು ಕೋಟ್ಯಂತರ ಭಕ್ತರ ಭಾವನೆಗಳ ಜತೆ ಆಟವಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಮಾಜಿ ಸಿಎಂ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ತಿರುಗೇಟು ನೀಡಿ, ಹೈಕೋರ್ಟ್‌ ಮೆಟ್ಟಲೇರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments