Webdunia - Bharat's app for daily news and videos

Install App

ಕಾಣೆಯಾದ ವಿಮಾನ ಪ್ರಕರಣದಲ್ಲಿ ಹೊಸ ಟ್ವಿಸ್ಟ್

Webdunia
ಶನಿವಾರ, 30 ಜುಲೈ 2016 (14:24 IST)
ಕಾಣೆಯಾದ ವಿಮಾನ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ದೊರೆತಿದೆ. ಅಪಘಾತವಾಗಿದೆ ಎಂದು ಉಹಿಸಲಾದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕುಟುಂಬದವರು ಆತನ ಫೋನ್ ಇವತ್ತಿಗೂ ಚಾಲನೆಯಲ್ಲಿದೆ ಎಂದು ವಾಯುಸೇನೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 
 
ಏರ್‌ಮ್ಯಾನ್ ರಘುಬೀರ್ ಸಂಬಂಧಿಕರು ಮಾಧ್ಯಮಗಳಿಗೆ ಮಾಹಿತಿ ನೀಡಿ, ಆತನ ಪೋನ್ ರಿಂಗ್ ಆಗುತ್ತಿದ್ದು ಆತನ ವಾಟ್ಸಪ್ ಸ್ಟೇಟಸ್ ಕೊನೆಯದಾಗಿ 26ನೇ ಜುಲೈ ತೋರಿಸುತ್ತಿದೆ ಎಂದು ತಿಳಿಸಿದ್ದಾರೆ.
 
ಕಳೆದ ಜುಲೈ 22 ರಂದು ಚೆನ್ನೈನ ತಾಂಬರಂ ಏರ್‌ಬೇಸ್‌ನಿಂದ ಹಾರಿದ ವಿಮಾನ ಕೇವಲ 16 ನಿಮಿಷಗಳಲ್ಲಿಯೇ ಕಾಣೆಯಾಗಿತ್ತು. ಕಾಣೆಯಾದ ವಿಮಾನದ ಪತ್ತೆಗಾಗಿ ವಾಯುದಳ, ನೌಕಾದಳ ಭಾರಿ ಕಾರ್ಯಾಚರಣೆ ನಡೆಸಿದ್ದವು. ಇತ್ತೀಚಿನ ಬೆಳವಣಿಗೆಗಳಿಂದ ರಘುಬೀರ್ ಜೀವಂತವಾಗಿರಬಹುದು ಎನ್ನುವ  ಆಶಾಭಾವನೆ ಆತನ ಕುಟುಂಬದವರಲ್ಲಿ ಮೂಡಿದೆ
 
ರಘುಬೀರ್ ಕುಟುಂಬದವರು ಕೂಡಲೇ ವಾಯುಸೇನೆ ಅಧಿಕಾರಿಗಳು ಮತ್ತು ಅಪರಾಧ ದಳದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ವಾಯುಸೇನೆ ಅಧಿಕಾರಿಗಳು ರಘುಬೀರ್ ಫೋನ್ ಕರೆಗಳ ವಿವರಗಳನ್ನು ಪಡೆದು ತನಿಖೆ ಆರಂಭಿಸಿದ್ದಾರೆ. ಇಂತಹ ಬೆಳವಣಿಗೆ ಪ್ರಕರಣವನ್ನು ಮತ್ತಷ್ಟು ನಿಗೂಢವಾಗಿಸಿದೆ ಎಂದು ವಾಯುದಳದ ಅಧಿಕಾರಿಗಳು ತಿಳಿಸಿದ್ದಾರೆ. 
 
ಪ್ರಸ್ತುತ, ಅನೇಕ ವಿಮಾನಗಳು, ಹಡಗುಗಳು ಮತ್ತು ಸಬ್‌ಮರಿನ್‌ ಹಾಗೂ ಖಾಸಗಿ ವಿಮಾನಗಳು ಕೂಡಾ ಕಾಣೆಯಾದ ವಿಮಾನದ ಪತ್ತೆಗಾಗಿ ಹರಸಾಹಸ ಪಡುತ್ತಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments